ಮೈಸೂರು ವಿವಿ 
ರಾಜ್ಯ

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮೈಸೂರು ವಿವಿ ಉಚಿತ ಸೀಟು

ಕೋವಿಡ್‌-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಣಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. 

ಮೈಸೂರು: ಕೋವಿಡ್‌-19ನಿಂದ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಣಗಳಿಗೆ ಉಚಿತ ಪ್ರವೇಶಾತಿ ನೀಡಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. 

ಕೊರೋನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ವಿದ್ಯಾಭ್ಯಾಸ ಮಾಡಲು ಅಶಕ್ತರಾದವರಿಗೆ 'ಉಚಿತ ಸೀಟು' ನೀಡುವ ಮಹತ್ವದ ತೀರ್ಮಾನವನ್ನು ಮೈಸೂರು ವಿಶ್ವವಿದ್ಯಾನಿಲಯ ತೆಗೆದುಕೊಂಡಿದೆ. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಯಿತು.

ಕೋವಿಡ್-19 ವೈರಾಣು 2ನೇ ಆಲೆಯಿಂದ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಸಾವು- ನೋವು ಉಂಟಾಗಿ ಅನೇಕರು ತಂದೆ -ತಾಯಿ ಹಾಗೂ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಕೆಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಂದೆ ಅಥವಾ ತಾಯಿಯನ್ನು ಕಳೆದುಕೊಂಡು ವಿದ್ಯಾರ್ಜನೆ ಮುಂದುವರಿಸಲು ಕಷ್ಟ-ಸಾಧ್ಯವಾಗಿದೆ. 

ಈ ಜಾಗತಿಕ ಸಂಕಷ್ಟದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ, ಈ ರೀತಿ ತಂದೆ- ತಾಯಂದಿರನ್ನು ಅಥವಾ ಕುಟುಂಬದ ಜವಾಬ್ದಾರಿಯನ್ನು ವಹಿಸಿಕೊಂಡ ಮುಖ್ಯಸ್ಥರನ್ನು ಕಳೆದುಕೊಂಡು ವಿದ್ಯಾರ್ಜನೆ ಮುಂದುವರೆಸಲು ಸಾಧ್ಯವಾಗದಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಲು ಹಾಗೂ ಅವರ ಬದುಕಿನ ಭವಿಷ್ಯವನ್ನು ರೂಪಿಸಲು ಪ್ರಸ್ತಾವನೆಯನ್ನು ತಯಾರಿಸಿರುವುದನ್ನು ಸಭೆಯ ಮುಂದೆ ಮಂಡಿಸಲಾಯಿತು.

ವಿವಿ ವ್ಯಾಪ್ತಿಗೆ ಬರುವ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಸಂಜೆ ಕಾಲೇಜು ಮತ್ತು ಲಲಿತಕಲಾ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಐದು ಸೀಟು ಕಾಯ್ದಿರಿಸಲಾಗುವುದು. ಅದೇ ರೀತಿ ನಮ್ಮ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಪಿಜಿ ಕ್ಯಾಂಪಸ್‌ಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಮೂರು ಉಚಿತ ಸೀಟುಗಳನ್ನು ಕಾಯ್ದಿರಿಸಲಾಗುವುದು. ಈ ಸೀಟುಗಳನ್ನು ಅರ್ಹರಿಗೆ ಮತ್ತು ಕುಟುಂಬದಲ್ಲಿ ಗಳಿಸುವ ಸದಸ್ಯರನ್ನು ಕಳೆದುಕೊಂಡವರಿಗೆ ಮೆರಿಟ್ ಆಧಾರದ ಮೇಲೆ ನೀಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಜಿ.ಹೆಮಂತ ಕುಮಾರ್ ಹೇಳಿದ್ದಾರೆ.

ಬಡ ವಿದ್ಯಾರ್ಥಿಗಳಿಗೆ ಮತ್ತು ಕೋವಿಡ್‌ ನಿಂದ ಪೋಷಕರನ್ನು ಕಳೆದುಕೊಂಡಿರುವ, ಆರ್ಥಿಕವಾಗಿ ದುರ್ಬಲ ಕುಟುಂಬಗಳಿಂದ ಬರುವವರಿಗೆ ಉಚಿತ ಸೀಟು ಒದಗಿಸಲು ನಾನು ವಿವಿ ಅಧಿಕಾರಿಗಳಿಗೆ ಮನವಿ ಮಾಡಿದ್ದೆ, ನನ್ನ ಮನವಿಯನ್ನು ವಿವಿ ಅಂಗೀಕರಿಸಿದೆ ಎಂದು ವಿವಿ ಸಿಂಡಿಕೇಟ್ ಸದಸ್ಯ ನಾಗರಾಜ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT