ನೀರುಪಾಲಾದ ಮಕ್ಕಳು 
ರಾಜ್ಯ

ವಿಜಯಪುರ: ಭೀಮಾ ನದಿಯಲ್ಲಿ ನಾಲ್ವರು ಮಕ್ಕಳು ನೀರುಪಾಲು, ಓರ್ವ ಬಾಲಕಿ ಮೃತದೇಹ ಪತ್ತೆ

ನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ  ಗಡಿಯ  ಲವಗಿ ಗ್ರಾಮದಲ್ಲಿ ನಡೆದಿದೆ. 

ವಿಜಯಪುರ: ನನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ  ಗಡಿಯ  ಲವಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ಮಕ್ಕಳು ಭೀಮಾನದಿಯಲ್ಲಿ ಈಜಲು ತೆರಳಿದ್ದವರು ನಾಪತ್ತೆಯಾಗಿದ್ದು ಇದುವರೆಗೆ ಓರ್ವ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರಿಗಾಗಿ ಶೋಧ ನಡೆದಿದೆ.

ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13), ವಿಠ್ಠಲ(10) ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ(14), ಅರ್ಪಿತಾ(13)  ನಿನ್ನೆ ಸಂಜೆ ನದಿಯಲ್ಲಿ ಈಜಲು ತೆರಳಿದ್ದರು. ಇವರ ಪೈಕಿ ಆರತಿ ಮೃತದೇಹ ಮಾತ್ರ ಸಿಕ್ಕಿದ್ದು ಇನ್ನೂ ಮೂವರು ಪತ್ತೆಯಾಗಿಲ್ಲ.

ಮನೆಯವರು ಕೆಲಸದಲ್ಲಿ ತೊಡಗಿದ್ದ ವೇಳೆ ಮಕ್ಕಳು ನದಿಯತ್ತ ತೆರಳಿದ್ದಾರೆ. ಆ ವೇಳೆ ನದಿಯಲ್ಲಿನ ನೀರಿನ ಸೆಳವಿಗೆ ಸಿಕ್ಕು ಕೊಚ್ಚಿ ಹೋಗಿದ್ದಾರೆಂದು ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT