ಸಾರಿಗೆ ಸಹಾಯವಾಣಿ 
ರಾಜ್ಯ

ಸಾರಿಗೆ,  ಅಂಬ್ಯುಲೆನ್ಸ್ ಚಾಲಕರಿಗೆ ಪ್ರತ್ಯೇಕ ಸಹಾಯವಾಣಿ: ಸಚಿವ ಲಕ್ಷ್ಮಣ ಸವದಿ

ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಂಗಳೂರು: ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಚಿವರು ಈ ನಿಟ್ಟಿನಲ್ಲಿ ಟ್ವೀಟ್ ಮಾಡಿದ್ದು "ಕೋವಿಡ್ ಪಿಡುಗನ್ನು ತಡೆಯುವ ಪ್ರಯತ್ನದ ಅಂಗವಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.

"ಈ ಸಹಾಯವಾಣಿಯ ನಂಬರ್ 9449 86 3214. ವಿಳಾಸ: ಸಾರಿಗೆ ಆಯುಕ್ತರ ಕಛೇರಿ, 1ನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಶಾಂತಿನಗರ, ಬೆಂಗಳೂರು- 27 

"ಸಾರಿಗೆ ಸೇವೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಅಥವಾ ಕುಂದುಕೊರತೆಗಳಿದ್ದಲ್ಲಿ ಸಾರ್ವಜನಿಕರು ಈ ಸಹಾಯವಾಣಿಯನ್ನು ಸಂಪರ್ಕಿಸಿ ಉಪಯೋಗ ಪಡೆದುಕೊಳ್ಳಬಹುದು.

"ಕೋವಿಡ್ ರೋಗದಿಂದ ತೊಂದರೆಗೆ ಒಳಗಾಗಿರುವ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಬುಲೆನ್ಸ್ ಸೇವೆಗೂ ಸರ್ಕಾರ ಸೂಕ್ತ ದರವನ್ನು ನಿಗದಿಪಡಿಸಿದ್ದು, ಆ ಪ್ರಕಾರವೇ ಅಂಬುಲೆನ್ಸ್ ಸೇವೆಗೆ ಅಂಬುಲೆನ್ಸ್ ವಾಹನಗಳ ಮಾಲೀಕರು ದರ ವಿಧಿಸಬೇಕಾಗಿದೆ. 

"ಆದರೆ ಕೆಲವು ಪ್ರಕರಣಗಳಲ್ಲಿ  ಅಂಬುಲೆನ್ಸ್ ಸೇವೆಗೆ ಸಾರ್ವಜನಿಕರಿಂದ ಅಧಿಕ ಶುಲ್ಕ ಸಂಗ್ರಹಿಸುತ್ತಿರುವ ಆರೋಪಗಳು ವ್ಯಕ್ತವಾಗಿವೆ. ಇದು ಸರಿಯಲ್ಲ. ಒಂದು ವೇಳೆ ಸರ್ಕಾರದ ನಿಗದಿಪಡಿಸಿರುವ ದರಕ್ಕಿಂತಲೂ ಹೆಚ್ಚು ಹಣವನ್ನು ಯಾರೇ ಸಂಗ್ರಹಿಸಿ ನಿಯಮ ಉಲ್ಲಂಘಿಸಿದರೂ  ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT