ಪುನೀತ್ ರಾಜ್ ಕುಮಾರ್ ಗೆ ಶ್ರದ್ದಾಂಜಲಿ(ಸಂಗ್ರಹ ಚಿತ್ರ) 
ರಾಜ್ಯ

ಸಾವಿನಲ್ಲಿಯೂ ಬೇರೆಯವರ ಬಾಳಿಗೆ ಬೆಳಕಾದ 'ಅಪ್ಪು': ಪುನೀತ್ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ

ಸಾವಿನಲ್ಲೂ ಸಾರ್ಥಕತೆಯನ್ನು ನಟ ಪುನೀತ್ ರಾಜ್ ಕುಮಾರ್ ಮೆರೆದಿದ್ದಾರೆ. ಅವರಿಂದಾಗಿ ನಾಲ್ವರು ಜಗತ್ತನ್ನು ಇಂದು ನೋಡುವಂತಾಗಿದೆ. ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳಿಂದ ನಾಲ್ವರು ಅಂಧಹೀನರಿಗೆ ಅತ್ಯಾಧುನಿಕ ಹೊಸ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ದೃಷ್ಟಿ ನೀಡಲಾಗಿದೆ.

ಬೆಂಗಳೂರು: ಸಾವಿನಲ್ಲೂ ಸಾರ್ಥಕತೆಯನ್ನು ನಟ ಪುನೀತ್ ರಾಜ್ ಕುಮಾರ್ ಮೆರೆದಿದ್ದಾರೆ. ಅವರಿಂದಾಗಿ ನಾಲ್ವರು ಜಗತ್ತನ್ನು ಇಂದು ನೋಡುವಂತಾಗಿದೆ. ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳಿಂದ ನಾಲ್ವರು ಅಂಧಹೀನರಿಗೆ ಅತ್ಯಾಧುನಿಕ ಹೊಸ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ದೃಷ್ಟಿ ನೀಡಲಾಗಿದೆ.

ಎರಡು ಕಣ್ಣುಗಳನ್ನು ಭಾಗಗಳನ್ನಾಗಿ ಮಾಡಿ ನಾಲ್ವರಿಗೆ ದೃಷ್ಟಿಯನ್ನು ನೀಡಲಾಗಿದೆ ಎಂದು ನಾರಾಯಣ ನೇತ್ರಾಯಲಯ ಡಾ ಭುಜಂಗ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಸಾಮಾನ್ಯವಾಗಿ ನೇತ್ರದಾನ ಮಾಡಿದವರ ಕಣ್ಣುಗಳನ್ನು ಇಬ್ಬರಿಗೆ ನೀಡುತ್ತೇವೆ. ಆದರೆ ಅಪ್ಪು ಅವರ ಕಣ್ಣುಗಳನ್ನು ವಿಭಿನ್ನವಾಗಿ ಶಸ್ತ್ರಕ್ರಿಯೆ ಮಾಡಿ ನಾಲ್ವರಿಗೆ ನೀಡಿದ್ದೇವೆ. ಇದು ನಾವು ಮಾಡಿರುವ ಮೊದಲ ಪ್ರಯತ್ನ, ಅತ್ಯಾಧುನಿಕ ಶಸ್ತ್ರಕ್ರಿಯೆ ಮೂಲಕ ಈ ರೀತಿ ಮಾಡಲಾಗಿದೆ. ನಮಗೆ ನಮ್ಮ ಪ್ರಯತ್ನದಲ್ಲಿ ಯಶಸ್ಸು ಸಿಕ್ಕಿದ್ದು ಬಹಳ ಖುಷಿಯಾಗುತ್ತಿದೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಬಹಳ ಆರೋಗ್ಯವಾಗಿದ್ದರಿಂದ ಇದು ಸಾಧ್ಯವಾಯಿತು, ಅವರ ಕಣ್ಣುಗಳನ್ನು ಪಡೆದವರು ಚೆನ್ನಾಗಿದ್ದಾರೆ, ಒಬ್ಬ ಮಹಿಳೆ ಮತ್ತು ಮೂವರು ಪುರುಷರಿಗೆ ಕಣ್ಣುಗಳನ್ನು ದಾನಮಾಡಿದ್ದು ಎಲ್ಲರೂ ವಯಸ್ಕರಾಗಿದ್ದಾರೆ ಎಂದರು.

ಮೊನ್ನೆ ಶನಿವಾರ ಒಂದು ದಿನವಿಡೀ ಈ ಶಸ್ತ್ರಕ್ರಿಯೆಗೆ ಸಮಯ ಹಿಡಿಯಿತು, ಈ ಶಸ್ತ್ರಕ್ರಿಯೆಯನ್ನು ಯಶಸ್ವಿಯಾಗಿ ಮಾಡಿದ ವೈದ್ಯರ ತಂಡಕ್ಕೆ ಧನ್ಯವಾದಗಳು ಎಂದರು.

ಮೊಟ್ಟಮೊದಲು ಡಾ ರಾಜ್ ಕುಮಾರ್ ಕುಟುಂಬಕ್ಕೆ ನಾನು ಧನ್ಯವಾದಗಳನ್ನು ಹೇಳುತ್ತೇನೆ. 1994ರಲ್ಲಿ ಅವರ ಕುಟುಂಬ ನಮ್ಮ ನಾರಾಯಣ ನೇತ್ರಾಲಯದಲ್ಲಿ ಡಾ ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರು ಸೇರಿ ಡಾ ರಾಜ್ ಕುಮಾರ್ ನೇತ್ರದಾನ ಕೇಂದ್ರ ಉದ್ಘಾಟಿಸಿದರು. 2006ರಲ್ಲಿ ಅಣ್ಣಾವ್ರು ತೀರಿಕೊಂಡಾಗ ಅವರ ಕಣ್ಣುಗಳು ದಾನವಾದವು. 2017ರಲ್ಲಿ ಪಾರ್ವತಮ್ಮನವರು ತೀರಿಹೋದಾಗ ಅವರ ಕಣ್ಣುಗಳು ದಾನವಾದವು. ಮೊನ್ನೆ ಶುಕ್ರವಾರ ಪುನೀತ್ ಅವರ ಜೀವನ ದುರಂತದಲ್ಲಿ ಕೊನೆಯಾದಾಗ ಆ ದುಃಖದ ಮಧ್ಯೆ ಕೂಡ ನಮ್ಮ ಸಂಸ್ಥೆಗೆ ನೇತ್ರದಾನ ಮಾಡಿದರು. ಇದಕ್ಕೆ ಡಾ ರಾಜ್ ಕುಟುಂಬಕ್ಕೆ ನಾನು ಧನ್ಯವಾದಗಳನ್ನು ಹೇಳುತ್ತೇನೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT