ರಾಜ್ಯ

ಪುನೀತ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಪ್ರಧಾನಿಗೆ ಸಿದ್ದರಾಮಯ್ಯ ಮನವಿ

Nagaraja AB

ಬೆಂಗಳೂರು: ಶುಕ್ರವಾರ ನಿಧನರಾದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್ ಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ- ಅಭಿಯಾನ ದೊಡ್ಡದು ಎಂದಿದ್ದಾರೆ.

ಪುನೀತ್ ರಾಜ್ ಕುಮಾರ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರಿ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

SCROLL FOR NEXT