ಪ್ರಭು ಗಣೇಶನ್ 
ರಾಜ್ಯ

ಪುನೀತ್ ಮನೆಗೆ ತಮಿಳು ನಟ ಪ್ರಭು ಗಣೇಶನ್ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಅಪ್ಪು ನಮ್ಮನ್ನ ಬಿಟ್ಟು ಹೋಗಿದ್ದು ಬಹಳ ನೋವು ತಂದಿದೆ. ತಂದೆ ಶಿವಾಜಿ, ರಾಜ್​​​ಕುಮಾರ್ ಅವರು ಆತ್ಮೀಯ ಸ್ನೇಹಿತರಾಗಿದ್ದರು. ನಾನು, ಅಪ್ಪು, ಶಿವಣ್ಣ, ರಾಘಣ್ಣ ಸಹೋದರರ ರೀತಿ‌ ಇದ್ದೇವು. ನಮ್ಮ ಕುಟುಂಬಕ್ಕೆ ಬಹಳ ಆತ್ಮೀಯರಾಗಿದ್ದರು

ಬೆಂಗಳೂರು: ಪುನೀತ್​​ ರಾಜ್​​ಕುಮಾರ್ ನಮ್ಮನ್ನು ಅಗಲಿ ನಾಲ್ಕು ದಿನಗಳು ಕಳೆದಿದೆ. ಅಪ್ಪು ಅಗಲಿಕೆಯ ನೋವು ನಾಡಿನ ಸಮಸ್ತ ಕಾಡುತ್ತಿದೆ. ಅಭಿಮಾನಿಗಳಷ್ಟೇ ಅಲ್ಲ, ಪುನೀತ್​ ಕುಟುಂಬಕ್ಕೂ ಇದು ನಂಬಲಸಾಧ್ಯವಾಗಿದ್ದು, ಇಂದು ಪುನೀತ್ ನಿವಾಸಕ್ಕೆ ತಮಿಳು ನಟ ಪ್ರಭು ಗಣೇಶನ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ್ದಾರೆ.

ಅಪ್ಪು ಕುಟುಂಬವನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಭು ಗಣೇಶನ್ ಅವರು, ಅಪ್ಪು ನಮ್ಮನ್ನ ಬಿಟ್ಟು ಹೋಗಿದ್ದು ಬಹಳ ನೋವು ತಂದಿದೆ. ತಂದೆ ಶಿವಾಜಿ, ರಾಜ್​​​ಕುಮಾರ್ ಅವರು ಆತ್ಮೀಯ ಸ್ನೇಹಿತರಾಗಿದ್ದರು.

ನಾನು, ಅಪ್ಪು, ಶಿವಣ್ಣ, ರಾಘಣ್ಣ ಸಹೋದರರ ರೀತಿ‌ ಇದ್ದೇವು. ನಮ್ಮ ಕುಟುಂಬಕ್ಕೆ ಬಹಳ ಆತ್ಮೀಯರಾಗಿದ್ದರು. ದೃಶ್ಯ ಚಿತ್ರೀಕರಣದ ಸಮಯದಲ್ಲೂ ಅವರನ್ನು ಭೇಟಿಯಾಗಿದ್ದೆವು. ಯಾವಾಗ ಬೆಂಗಳೂರಿನಲ್ಲಿ ಇದ್ದರು ಬಂದು ಭೇಟಿ ಮಾಡುತ್ತಿದ್ದರು. ಪುನೀತ್​ ವಾತ್ಸಲ್ಯದ ರಾಯಭಾರಿಯಾಗಿದ್ದರು. ಅವರ ಅಗಲಿಕೆ ಕನ್ನಡ ಚಿತ್ರರಂಗ ಮಾತ್ರವಲ್ಲ, ತಮಿಳು ಅಷ್ಟೇ ಅಲ್ಲ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಕಣ್ಣೀರಿಟ್ಟರು.

ನನಗೆ ಆರೋಗ್ಯ ಸರಿ ಇಲ್ಲದ ಸಂದರ್ಭದಲ್ಲಿ ಶೂಟಿಂಗ್​ ರದ್ದು ಮಾಡಿ 6 ಗಂಟೆಗಳ ಕಾಲ ನನ್ನ ಜೊತೆಗೆ ಕುಳಿತ್ತಿದ್ದರು. ಆ ಘಟನೆಯನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ದೇವರು ಅಪ್ಪುನನ್ನು ಕರೆದುಕೊಂಡು ಕೊಂಡು ನಿರ್ದಯಿಯಾಗಿ ನಡೆದುಕೊಂಡಿದ್ದಾನೆ. ಇದನ್ನು ನನ್ನಿಂದ ತಡೆದುಕೊಳ್ಳಲು ಆಗುತ್ತಿಲ್ಲ ಎಂದರೇ, ಇನ್ನು ಕುಟುಂಬಸ್ಥರು ಹೇಗೆ ತೆಗೆದುಕೊಳ್ತಾರೆ..? ಅವರಿಗೆ ಸಾಂತ್ವನ ಹೇಳಿದರೇ, ನನ್ನ ಕುಟುಂಬಕ್ಕೆ ನಾನೇ ಸಾಂತ್ವನ ಹೇಳಿದಂತೆ ಎಂದು ಭಾವುಕರಾಗ ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT