ಪ್ರಭು ಗಣೇಶನ್ 
ರಾಜ್ಯ

ಪುನೀತ್ ಮನೆಗೆ ತಮಿಳು ನಟ ಪ್ರಭು ಗಣೇಶನ್ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಅಪ್ಪು ನಮ್ಮನ್ನ ಬಿಟ್ಟು ಹೋಗಿದ್ದು ಬಹಳ ನೋವು ತಂದಿದೆ. ತಂದೆ ಶಿವಾಜಿ, ರಾಜ್​​​ಕುಮಾರ್ ಅವರು ಆತ್ಮೀಯ ಸ್ನೇಹಿತರಾಗಿದ್ದರು. ನಾನು, ಅಪ್ಪು, ಶಿವಣ್ಣ, ರಾಘಣ್ಣ ಸಹೋದರರ ರೀತಿ‌ ಇದ್ದೇವು. ನಮ್ಮ ಕುಟುಂಬಕ್ಕೆ ಬಹಳ ಆತ್ಮೀಯರಾಗಿದ್ದರು

ಬೆಂಗಳೂರು: ಪುನೀತ್​​ ರಾಜ್​​ಕುಮಾರ್ ನಮ್ಮನ್ನು ಅಗಲಿ ನಾಲ್ಕು ದಿನಗಳು ಕಳೆದಿದೆ. ಅಪ್ಪು ಅಗಲಿಕೆಯ ನೋವು ನಾಡಿನ ಸಮಸ್ತ ಕಾಡುತ್ತಿದೆ. ಅಭಿಮಾನಿಗಳಷ್ಟೇ ಅಲ್ಲ, ಪುನೀತ್​ ಕುಟುಂಬಕ್ಕೂ ಇದು ನಂಬಲಸಾಧ್ಯವಾಗಿದ್ದು, ಇಂದು ಪುನೀತ್ ನಿವಾಸಕ್ಕೆ ತಮಿಳು ನಟ ಪ್ರಭು ಗಣೇಶನ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ್ದಾರೆ.

ಅಪ್ಪು ಕುಟುಂಬವನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಭು ಗಣೇಶನ್ ಅವರು, ಅಪ್ಪು ನಮ್ಮನ್ನ ಬಿಟ್ಟು ಹೋಗಿದ್ದು ಬಹಳ ನೋವು ತಂದಿದೆ. ತಂದೆ ಶಿವಾಜಿ, ರಾಜ್​​​ಕುಮಾರ್ ಅವರು ಆತ್ಮೀಯ ಸ್ನೇಹಿತರಾಗಿದ್ದರು.

ನಾನು, ಅಪ್ಪು, ಶಿವಣ್ಣ, ರಾಘಣ್ಣ ಸಹೋದರರ ರೀತಿ‌ ಇದ್ದೇವು. ನಮ್ಮ ಕುಟುಂಬಕ್ಕೆ ಬಹಳ ಆತ್ಮೀಯರಾಗಿದ್ದರು. ದೃಶ್ಯ ಚಿತ್ರೀಕರಣದ ಸಮಯದಲ್ಲೂ ಅವರನ್ನು ಭೇಟಿಯಾಗಿದ್ದೆವು. ಯಾವಾಗ ಬೆಂಗಳೂರಿನಲ್ಲಿ ಇದ್ದರು ಬಂದು ಭೇಟಿ ಮಾಡುತ್ತಿದ್ದರು. ಪುನೀತ್​ ವಾತ್ಸಲ್ಯದ ರಾಯಭಾರಿಯಾಗಿದ್ದರು. ಅವರ ಅಗಲಿಕೆ ಕನ್ನಡ ಚಿತ್ರರಂಗ ಮಾತ್ರವಲ್ಲ, ತಮಿಳು ಅಷ್ಟೇ ಅಲ್ಲ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಕಣ್ಣೀರಿಟ್ಟರು.

ನನಗೆ ಆರೋಗ್ಯ ಸರಿ ಇಲ್ಲದ ಸಂದರ್ಭದಲ್ಲಿ ಶೂಟಿಂಗ್​ ರದ್ದು ಮಾಡಿ 6 ಗಂಟೆಗಳ ಕಾಲ ನನ್ನ ಜೊತೆಗೆ ಕುಳಿತ್ತಿದ್ದರು. ಆ ಘಟನೆಯನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ದೇವರು ಅಪ್ಪುನನ್ನು ಕರೆದುಕೊಂಡು ಕೊಂಡು ನಿರ್ದಯಿಯಾಗಿ ನಡೆದುಕೊಂಡಿದ್ದಾನೆ. ಇದನ್ನು ನನ್ನಿಂದ ತಡೆದುಕೊಳ್ಳಲು ಆಗುತ್ತಿಲ್ಲ ಎಂದರೇ, ಇನ್ನು ಕುಟುಂಬಸ್ಥರು ಹೇಗೆ ತೆಗೆದುಕೊಳ್ತಾರೆ..? ಅವರಿಗೆ ಸಾಂತ್ವನ ಹೇಳಿದರೇ, ನನ್ನ ಕುಟುಂಬಕ್ಕೆ ನಾನೇ ಸಾಂತ್ವನ ಹೇಳಿದಂತೆ ಎಂದು ಭಾವುಕರಾಗ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶ್ರೀಲಂಕಾಗೆ ವೈಟ್ ವಾಷ್ ಭೀತಿ; ಸರಣಿ ಗೆದ್ದ ಭಾರತದ ಮಹಿಳಾ ಪಡೆ

36 ಗಂಟೆಗಳಲ್ಲಿ 80 ಡ್ರೋನ್‌; ಪಾಕ್‌ನ ನೂರ್ ಖಾನ್ ವಾಯುನೆಲೆ ನಾಶ: Operation Sindoor ಒಪ್ಪಿಕೊಂಡ Pak

ಭಾರತ ವಿಶ್ವಗುರು ಆಗುವುದು ನಮ್ಮ ಮಹತ್ವಾಕಾಂಕ್ಷೆಯಲ್ಲ; ಆದರೆ ಅದು ಜಗತ್ತಿಗೆ ಅವಶ್ಯಕ: RSS ಮುಖ್ಯಸ್ಥ ಭಾಗವತ್

ಉಸ್ಮಾನ್ ಹಾದಿ ಹತ್ಯೆ: ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿ- ಬಾಂಗ್ಲಾದೇಶ ಪೊಲೀಸ್

ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು: ಸ್ಥಳಕ್ಕೆ ಕೇರಳ ಸಂಸದ ಆಯ್ತು ಈಗ ಶಾಸಕನ ಭೇಟಿ

SCROLL FOR NEXT