ಸಚಿವ ಬಿ ಶ್ರೀರಾಮುಲು ಸುದ್ದಿಗೋಷ್ಠಿ 
ರಾಜ್ಯ

ನ 8, 9 ರಂದು ಎರಡು ದಿನ ರಾಜ್ಯಮಟ್ಟದ ಬುಡಕಟ್ಟು ಉತ್ಸವ: ಸಚಿವ ಬಿ ಶ್ರೀರಾಮುಲು

ಚಿತ್ರದುರ್ಗದಲ್ಲಿ ನವೆಂಬರ್ 8 ಹಾಗೂ 9 ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನವೆಂಬರ್ 8 ಹಾಗೂ 9 ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಡಕಟ್ಟು ಸಮುದಾಯದ ಇತಿಹಾಸ, ಕಲೆ ಹಾಗೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಆಚರಿಸಲಾಗುತ್ತಿದೆ ಎಂದರು.

ಬುಡಕಟ್ಟು ಉತ್ಸವದ ಕುರಿತು ಮಾಹಿತಿ ನೀಡಿದ ಅವರು, 'ಈ ಉತ್ಸವದಲ್ಲಿ ಬುಡಕಟ್ಟು ಜನರು ತಯಾರಿಸಿದ ಕರಕುಶಲ ವಸ್ತುಗಳು, ನಾಟಿ ಔಷಧಿಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಆಹಾರ ಮೇಳ ನಡೆಯಲಿದೆ. ಆಹಾರ ಮೇಳದಲ್ಲಿ ಬುಡಕಟ್ಟು ಜನರ ಆಹಾರ ಖಾದ್ಯಗಳ ಪರಿಚಯಿಸಲು ಚಿಂತನೆ ನಡೆದಿದ್ದು, ವಿಶೇಷವಾಗಿ ಬಂಬೂ ಬಿರಿಯಾನಿ ಆಕರ್ಷಕ ಖಾದ್ಯವಾಗಲಿದೆ. ಇದರೊಂದಿಗೆ ಕಾಡು ಜೇನುತುಪ್ಪ ಹಾಗೂ ಕಾಡು ಗೆಣಸುಗಳಿಂದ ತಯಾರಿಸಲಾದ ತರಾವರಿ ಖಾದ್ಯಗಳು ವಿಶೇಷ ಆಕರ್ಷಣೆಯಾಗಲಿವೆ ಎಂದರು.

ಸಂಜೆ ಬುಡಕಟ್ಟು ಕಲಾ ತಂಡಗಳಿಂದ ನೃತ್ಯ, ಕುಣಿತ, ಬುಡಕಟ್ಟು ಹಬ್ಬಗಳ ಆಚರಣೆ ಮುಂತಾದ ಸಾಂಸ್ಕೃತಿಕ ಕಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಎರಡು ದಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಬುಡಕಟ್ಟು ಸಮುದಾಯಗಳ ಜೀವನಶೈಲಿ ಕುರಿತಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ನಿರ್ಮಿಸಲಾಗಿರುವ ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ನಿರ್ಮಿಸಿರುವ ಸಾಕ್ಷ್ಯಚಿತ್ರಗಳ ಪ್ರದರ್ಶನವಿರಲಿದೆ. ಬುಡಕಟ್ಟು ಸಮುದಾಯಗಳಿಗೆ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಹೊಸ ಪ್ರಯತ್ನ ನಡೆದಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT