ಮೇಘನ್ ಎಚ್‌ಕೆ 
ರಾಜ್ಯ

ನೀಟ್ ಫಲಿತಾಂಶ ಪ್ರಕಟ: 5ನೇ ರ್ಯಾಂಕ್ ಹಂಚಿಕೊಂಡ ಸಿಇಟಿ ಟಾಪರ್, ಮಂಗಳೂರಿನ ಹುಡುಗ

ದೇಶಾದ್ಯಂತ ವೈದ್ಯಕೀಯ ಕಾಲೇಜ್ ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)ಯ ಫಲಿತಾಂಶ ಪ್ರಕಟವಾಗಿದ್ದು, ಮೈಸೂರಿನ ಮೇಘನ್ ಎಚ್‌ಕೆ ಹಾಗೂ ಮಂಗಳೂರಿನ....

ಬೆಂಗಳೂರು: ದೇಶಾದ್ಯಂತ ವೈದ್ಯಕೀಯ ಕಾಲೇಜ್ ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)ಯ ಫಲಿತಾಂಶ ಪ್ರಕಟವಾಗಿದ್ದು, ಮೈಸೂರಿನ ಮೇಘನ್ ಎಚ್‌ಕೆ ಹಾಗೂ ಮಂಗಳೂರಿನ ಜಶನ್ ಛಾಬ್ರಾ ಅವರು ಐದನೇ ರ್ಯಾಂಕ್ ಪಡೆದಿದ್ದಾರೆ.

ಮೈಸೂರಿನ ಪ್ರಮತಿ ಹಿಲ್ ವ್ಯೂ ಅಕಾಡೆಮಿಯ ವಿದ್ಯಾರ್ಥಿನಿ ಮೇಘನ್ ಎಚ್‌ಕೆ ಅವರ ಫಲಿತಾಂಶ ವಿಳಂಬವಾಗಿ ಪ್ರಕಟವಾಗಿದ್ದು, ಅವರು ಸಿಇಟಿಯಲ್ಲಿ ಎಂಜಿನಿಯರಿಂಗ್, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ, ಕೃಷಿ, ಪಶುವೈದ್ಯಕೀಯ ವಿಜ್ಞಾನ ಮತ್ತು ಫಾರ್ಮಸಿಯ ಎಲ್ಲಾ ವಿಭಾಗಗಳಲ್ಲಿ ಮೊದಲ ರ್ಯಾಂಕ್ ಪಡೆಯುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. 

ಇನ್ನೂ ನೀಟ್ ಪರೀಕ್ಷೆಯಲ್ಲಿ ಮೇಘನ್ ಅವರು 720 ಅಂಕಗಳಿಗೆ 715 ಅಂಕಗಳನ್ನು ಗಳಿಸಿದ್ದು, ತನ್ನ ಯಶಸ್ಸಿಗೆ ಕಾರಣರಾದ ಶಿಕ್ಷಣತಜ್ಞರಾದ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇನ್ನೂ ಮಂಗಳೂರಿನ ಜಶನ್ ಛಾಬ್ರಾ ಅವರು ಸಹ ನೀಟ್ ಪರೀಕ್ಷೆಯಲ್ಲಿ 720 ಕ್ಕೆ 715 ಅಂಕಗಳನ್ನು ಪಡೆಯುವ ಮೂಲಕ ಐದನೇ ರ್ಯಾಂಕ್ ಅನ್ನು ಹಂಚಿಕೊಂಡಿದ್ದಾರೆ.

ಬೆಳಗಾವಿಯ ಡಾ. ರಾಜಿ ತೇಜಸ್ವಿ ಮತ್ತು ಡಾ ಟಿಎಸ್ ತೇಜಸ್ವಿ ಅವರ ಪುತ್ರಿ ರೋಶನಿ ತೀರ್ಥಳ್ಳಿ ಅವರು ನೀಟ್ ಪರೀಕ್ಷೆಯಲ್ಲಿ 705 ಅಂಕಗಳನ್ನು ಪಡೆಯುವ ಮೂಲಕ 103ನೇ ರ್ಯಾಂಕ್ ಗಳಿಸಿದ್ದಾರೆ. ಬೆಳಗಾವಿಯ ಜಿಎಸ್‌ಎಸ್ ಕಾಲೇಜಿನಲ್ಲಿ ತೇರ್ಗಡೆಯಾದ ರೋಶನಿ, ತನ್ನ ಯಶಸ್ಸಿಗೆ ಕಾರಣರಾದ ಪೋಷಕರು, ಅಜ್ಜಿ ಮತ್ತು ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

SCROLL FOR NEXT