ಜನಸೇವಕ ಯೋಜನೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ 
ರಾಜ್ಯ

ಮನೆಬಾಗಿಲಿಗೇ ಸರ್ಕಾರದ ಸೇವೆ: ಪಿಂಚಣಿ ಕೈಯಲ್ಲಿ ಹಿಡಿದು ನಿಂತ ಬೊಮ್ಮಾಯಿ, ಸಿಎಂ ಕಂಡು ವೃದ್ಧ ಮಹಿಳೆ ದಿಗ್ಭ್ರಮೆ!

ಸರ್ಕಾರ ನೀಡುವ ಸೇವೆಗಳೂ ನಿಮ್ಮ ಕೈ ಸೇರದೆ ಹಲವು ವರ್ಷಗಳಿಂದ ಓಡಾಡಿ, ಸಾಕಾಗಿ ಸುಮ್ಮನಿರುವಾಗ ಇದ್ದಕ್ಕಿದ್ದಂತೆ ನಿಮ್ಮ ಸೇವೆಯನ್ನು ಹಿಡಿದು ನಿಮ್ಮ ಬಾಗಿಲಿಗೆ ಸ್ವತಃ ಮುಖ್ಯಮಂತ್ರಿಗಳೇ ಬಂದು ನಿಂತರೆ ನಿಮ್ಮ ಪರಿಸ್ಥಿತಿ ಹೇಗಾಗಬೇಡ... ಇದೇ ರೀತಿಯ ಘಟನೆಯೊಂದು ಮಲ್ಲೇಶ್ವರಂನ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿರುವ ವೃದ್ಧ ಮಹಿಳೆಯೊಬ್ಬರ ಜೀವನದಲ್ಲಿ ನಡೆದಿದೆ.

ಬೆಂಗಳೂರು: ಸರ್ಕಾರ ನೀಡುವ ಸೇವೆಗಳೂ ನಿಮ್ಮ ಕೈ ಸೇರದೆ ಹಲವು ವರ್ಷಗಳಿಂದ ಓಡಾಡಿ, ಸಾಕಾಗಿ ಸುಮ್ಮನಿರುವಾಗ ಇದ್ದಕ್ಕಿದ್ದಂತೆ ನಿಮ್ಮ ಸೇವೆಯನ್ನು ಕೈಯಲ್ಲಿ ಹಿಡಿದು ನಿಮ್ಮ ಬಾಗಿಲಿಗೆ ಸ್ವತಃ ಮುಖ್ಯಮಂತ್ರಿಗಳೇ ಬಂದು ನಿಂತರೆ ನಿಮ್ಮ ಪರಿಸ್ಥಿತಿ ಹೇಗಾಗಬೇಡ... ಇದೇ ರೀತಿಯ ಘಟನೆಯೊಂದು ಮಲ್ಲೇಶ್ವರಂನ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿರುವ ವೃದ್ಧ ಮಹಿಳೆಯೊಬ್ಬರ ಜೀವನದಲ್ಲಿ ನಡೆದಿದೆ.

75 ವರ್ಷದ ವೃದ್ಧ ಮಹಿಳೆ ಮಲ್ಲಿಕಾ ಅವರು ಹಲವು ವರ್ಷಗಳ ಹಿಂದೆಯೇ ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ನಗರದಲ ಮಲ್ಲೇಶ್ವರಂನ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿ ಸಣ್ಣ ಮನೆಯೊಂದರಲ್ಲಿ ಮಲ್ಲಿಕಾ ಅವರು ವಾಸವಿದ್ದು, ಆಗಾಗ ಅವರ ಪುತ್ರ ಮನೆ ಖರ್ಚಿಗೆ ಹಣವನ್ನು ನೀಡುತ್ತಿದ್ದು, ಅಕ್ಕಪಕ್ಕದ ಮನೆಯವರು ನೀಡುವ ಊಟದಿಂದ ಜೀವನ ಸಾಗಿಸುತ್ತಿದ್ದಾರೆ.

ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ಜನಸಾಮಾನ್ಯರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ಜನಸೇವಕ ಮತ್ತು ಏಕೀಕೃತ ಸಾರ್ವಜನಿಕ ಕುಂದು ಕೊರತೆ ನಿವಾರಣೆ ಮಾಡುವ ಜನಸ್ಪಂದನ ಯೋಜನೆಗಳಿಗೆ ಚಾಲನೆ ನೀಡಿದರು.

ಯೋಜನೆಯಡಿಯಲ್ಲಿ ಮುಖ್ಯಮಂತ್ರಿಗಳು ನಿನ್ನೆ ಕೆಲವು ಆಯ್ದ ಮನೆಗಳಿಗೆ ಭೇಟಿ ನೀಡಿದ್ದು, ಈ ವೇಳೆ ವಸತಿ ಪ್ರಮಾಣಪತ್ರ, ಆದಾಯ ಮತ್ತು ಜಾತಿ ಪ್ರಮಾಣಪತ್ರ, ಖಾತಾ, ವಿಧವಾ ಪಿಂಚಣಿ, ಕಾರ್ಮಿಕ ಕಾರ್ಡ್, ಹಿರಿಯ ನಾಗರಿಕ ಕಾರ್ಡ್, ಆಧಾರ್ ಕಾರ್ಡ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಮತ್ತು ಇತರ ದಾಖಲೆಗಳನ್ನು ವಿತರಿಸಿದರು.

ಮನೆಗಳಿಗೆ ಭೇಟಿ ನೀಡುತ್ತಿದ್ದ ಮುಖ್ಯಮಂತ್ರಿಗಳು ಇದೇ ವೇಳೆ 75 ವರ್ಷದ ಮಲ್ಲಿಕಾ ಅವರ ಮನೆ ಬಾಗಿಲಿಗೆ ಪಿಂಚಣಿ ಹಣವನ್ನು ಹಿಡಿದು ತೆರಳಿದ್ದರು.

ಮನೆ ಬಾಗಿಲು ತಟ್ಟುತ್ತಿದ್ದಂತೆಯೇ ಬಾಗಿಲು ತೆರೆದ ಮಲ್ಲಿಕಾ ಅವರು, ಬಾಗಿಲ ಬಳಿ ನಿಂತಿದ್ದ ಮುಖ್ಯಮಂತ್ರಿಗಳನ್ನು ಕಂಡು ದಿಗ್ಭಾಂತರಾಗಿದ್ದಾರೆ.

2 ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿದ್ದೆ. ಆದರೆ, ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಮುಖ್ಯಮಂತ್ರಿಗಳಿಂದಲೇ ಪಿಂಚಣಿ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಇದನ್ನು ಎಂದಿಗೂ ಮರೆಯುವುದಿಲ್ಲ. ಮುಖ್ಯಮಂತ್ರಿಗಳನ್ನು ನೋಡಿದ ಕೂಡಲೇ ಮಾತನಾಡಲು ನಾಲಿಗೆಯೇ ಹೊರಡಲಿಲ್ಲ. ಮುಖ್ಯಮಂತ್ರಿಗಳೇ ನನ್ನ ಆಶೀರ್ವಾದ ಪಡೆದುಕೊಂಡರು. ಬಹಳ ಸಂತೋಷವಾಗುತ್ತಿದೆ ಎಂದು ಮಲ್ಲಿಕಾ ಅವರು ಹೇಳಿದ್ದಾರೆ.

ಹಿರಿಯ ನಾಗರಿಕರ ಕಾರ್ಡ್‌ಗಳನ್ನು ಪಡೆದ ನಾಸೀರ್ (74) ಹಾಗೂ ಆಸ್ಮಾತುನಿಸ್ಸಾ (68) ಎಂಬುವವರು ಮಾತನಾಡಿ, ಬೆಳಿಗ್ಗೆಯೇ ಸಿದ್ಧರಾಗಿ, ಮುಖ್ಯಮಂತ್ರಿಗಳ ಆಗಮನಕ್ಕಾಗಿ ಕಾದು ಕುಳಿತಿದ್ದೆವು. ನಿಗದಿಯಂತೆಯೇ ಮುಖ್ಯಮಂತ್ರಿಗಳು ಮನೆಗೆ ಬಂದರು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದ್ದ ಸಮಯದಲ್ಲಿ ಎರಡು ರಸ್ತೆಗಳಲ್ಲಿದ್ದ ಮನೆಗಳಿಗೆ ಮಾತ್ರ ಮುಖ್ಯಮಂತ್ರಿಗಳು ಭೇಟಿ ನೀಡಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಸಮೋಸಾ ಹಾಗೂ ಕಾಫಿಯನ್ನು ಸವಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT