ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ನಿಯಮದಲ್ಲಿ ಬದಲಾವಣೆಗಳಿಲ್ಲ, ಮಾಸ್ಕ್ ಧರಿಸಿ ಹಬ್ಬ ಆಚರಿಸಿ: ಗೌರವ್ ಗುಪ್ತಾ

ಬೆಳಕಿನ ಹಬ್ಬ ದೀಪಾವಳಿ ಹಾಗೂ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ವೇಳೆ ಜನದಟ್ಟಣೆ ಸೇರದೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಾಗೂ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ವೇಳೆ ಜನದಟ್ಟಣೆ ಸೇರದೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಬ್ಬದ ಆಚರಣೆಗೆ ಪಾಲಿಕೆಯಿಂದ ಹೊಸ ಮಾರ್ಗಸೂಚಿ ಪ್ರಕಟಿಸುವುದಿಲ್ಲ. ಸರ್ಕಾರದ ಈಗಿರುವ ನಿಯಮಗಳನ್ನೇ ಎಲ್ಲರೂ ಪಾಲಿಸಬೇಕು. ನಗರದಲ್ಲಿ ಕೊರೋನಾ ಹತೋಟಿಯಲ್ಲಿದ್ದು, ಹೊಸ ಪ್ರಕರಣಗಳ ಸಂಖ್ಯೆ ಕಿಮೆಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಸುರಕ್ಷಿತ ಎಂದು ತಜ್ಞರು ತಿಳಿಸಿದರೂ ಸಾರ್ವಜನಿಕರು ಮಾಸ್ಕ್ ಧರಿಸದೇ ಓಡಾಡುವಂತಿಲ್ಲ, ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂದು ಎಚ್ಚರಿಸಿದರು,

ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಕುರಿತು ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ನಂತರ ಕೇಂದ್ರ ನೀಡುವ ಸೂಚನೆಯಂತೆ ಲಸಿಕೆಯನ್ನು ಮಕ್ಕಳಿಗೆ ಶಾಲೆಗಳಲ್ಲಿ ಅಥವಾ ಮನೆಗಳಲ್ಲಿ ನೀಡಬೇಕೇ ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆಂದು ಹೇಳಿದ್ದಾರೆ.

ಕೆ.ಆರ್.ವೃತ್ತ ಸೇರಿದಂತೆ ನಗರದ ವಿವಿಧೆಡೆ ಇರುವ ನೀರಿನ ಕಾರಂಜಿ, ಅಲ್ಲಿನ ವಿದ್ಯುತ್ ದೀಪಗಳು ಕಾರ್ಯಾರಂಭಗೊಳಿಸಲು ಬಿಬಿಎಂಪಿ ಕ್ರಮವಹಿಸತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT