ರಾಜ್ಯ

ಕೋವಿಡ್ ನಿಯಮದಲ್ಲಿ ಬದಲಾವಣೆಗಳಿಲ್ಲ, ಮಾಸ್ಕ್ ಧರಿಸಿ ಹಬ್ಬ ಆಚರಿಸಿ: ಗೌರವ್ ಗುಪ್ತಾ

Manjula VN

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಾಗೂ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ವೇಳೆ ಜನದಟ್ಟಣೆ ಸೇರದೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಬ್ಬದ ಆಚರಣೆಗೆ ಪಾಲಿಕೆಯಿಂದ ಹೊಸ ಮಾರ್ಗಸೂಚಿ ಪ್ರಕಟಿಸುವುದಿಲ್ಲ. ಸರ್ಕಾರದ ಈಗಿರುವ ನಿಯಮಗಳನ್ನೇ ಎಲ್ಲರೂ ಪಾಲಿಸಬೇಕು. ನಗರದಲ್ಲಿ ಕೊರೋನಾ ಹತೋಟಿಯಲ್ಲಿದ್ದು, ಹೊಸ ಪ್ರಕರಣಗಳ ಸಂಖ್ಯೆ ಕಿಮೆಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಸುರಕ್ಷಿತ ಎಂದು ತಜ್ಞರು ತಿಳಿಸಿದರೂ ಸಾರ್ವಜನಿಕರು ಮಾಸ್ಕ್ ಧರಿಸದೇ ಓಡಾಡುವಂತಿಲ್ಲ, ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂದು ಎಚ್ಚರಿಸಿದರು,

ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಕುರಿತು ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ನಂತರ ಕೇಂದ್ರ ನೀಡುವ ಸೂಚನೆಯಂತೆ ಲಸಿಕೆಯನ್ನು ಮಕ್ಕಳಿಗೆ ಶಾಲೆಗಳಲ್ಲಿ ಅಥವಾ ಮನೆಗಳಲ್ಲಿ ನೀಡಬೇಕೇ ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆಂದು ಹೇಳಿದ್ದಾರೆ.

ಕೆ.ಆರ್.ವೃತ್ತ ಸೇರಿದಂತೆ ನಗರದ ವಿವಿಧೆಡೆ ಇರುವ ನೀರಿನ ಕಾರಂಜಿ, ಅಲ್ಲಿನ ವಿದ್ಯುತ್ ದೀಪಗಳು ಕಾರ್ಯಾರಂಭಗೊಳಿಸಲು ಬಿಬಿಎಂಪಿ ಕ್ರಮವಹಿಸತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

SCROLL FOR NEXT