ಪುನೀತ್ ರಾಜಕುಮಾರ್ 
ರಾಜ್ಯ

ಅಪ್ಪು ಹೋದ ಜಾಗಕ್ಕೆ ನಾನು ಹೋಗ್ತೇನೆ: ಡೆತ್ ನೋಟ್ ಬರೆದು ತುಮಕೂರಿನಲ್ಲಿ ಪುನೀತ್ ಅಭಿಮಾನಿ ಆತ್ಮಹತ್ಯೆ

ನಟ ಪುನೀತ್ ರಾಜ್​ಕುಮಾರ್ ಸಾವನ್ನು ಸಹಿಸಿಕೊಳ್ಳಲಾಗದ ತುಮಕೂರಿನ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು: ನಟ ಪುನೀತ್ ರಾಜ್​ಕುಮಾರ್ ಸಾವನ್ನು ಸಹಿಸಿಕೊಳ್ಳಲಾಗದ ತುಮಕೂರಿನ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪ್ಪು ಹೋದ ಜಾಗಕ್ಕೆ ನಾನು ಹೋಗುತ್ತೇನೆ" ಎಂದು ಡೆತ್​ನೋಟ್​ ಬರೆದಿಟ್ಟು, ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತುಮಕೂರಿನ ಭರತ್ (20) ಆತ್ಮಹತ್ಯೆಗೆ ಶರಣಾದ ಅಭಿಮಾನಿ. ತುಮಕೂರು ತಾಲೂಕಿನ ಹೆಬ್ಬೂರಿನ ಕೋಡಿಪಾಳ್ಯದಲ್ಲಿ ಈ ಘಟನೆ ನಡೆದಿದೆ. "ನಾನು ಅಪ್ಪು ಅವರ ಅಭಿಮಾನಿಯಾಗಿದ್ದು, ಅವರ ಸಾವನ್ನು ಸಹಿಸಲಾಗುತ್ತಿಲ್ಲ" ಎಂದು ಡೆತ್​ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಗಾರೆ ಕೆಲಸ ಮಾಡಿಕೊಂಡಿದ್ದ ಭರತ್, ಪುನೀತ್ ಇಲ್ಲದೆ ಇರೋದಕ್ಕೆ ಆಗುತ್ತಿಲ್ಲ. ಅವರು ಹೋದ ಜಾಗಕ್ಕೆ ನಾನೂ ಹೋಗುತ್ತೇನೆ. ನನ್ನ ಕಣ್ಣುಗಳನ್ನು ದಾನ ಮಾಡಿ ಎಂದು ಡೆತ್​ನೋಟ್ ಬರೆದಿಟ್ಟು ಕೋಡಿಪಾಳ್ಯದ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT