ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ 
ರಾಜ್ಯ

ರೂಪದರ್ಶಿಯರ ಸಾವು: ಪೊಲೀಸರಿಂದ ಹೊಟೇಲ್ ಮತ್ತು ಮಾರ್ಗ ಪರಿಶೀಲನೆ

ಅಪಘಾತ ನಡೆದ ಪ್ರದೇಶದಲ್ಲಿ ರಸ್ತೆ ಗುಂಡಿಗಳು ಸೇರಿದಂತೆ ಯಾವುದೇ ತೊಂದರೆ ಇರಲಿಲ್ಲ ಎಂದು ಕೇರಳ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕೊಚ್ಚಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಬ್ಬರು ರೂಪದರ್ಶಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅವರು ತಂಗಿದ್ದ ಹೊಟೇಲ್ ಮತ್ತು ಅವರು ಪ್ರಯಾಣಿಸುತ್ತಿದ್ದ ಮಾರ್ಗದ ಪರಿಶೀಲನೆ ನಡೆಸಿದ್ದಾರೆ. 

ಸೋಮವಾರ ಬ್ಬರು ರೂಪದರ್ಶಿಯರು ಪ್ರಯಾಣಿಸುತ್ತಿದ್ದ ಕಾರು ಕೊಚ್ಚಿಯ ವೈಟಿಲ್ಲ ಎಂಬಲ್ಲಿ ಮರವೊಂದಕ್ಕೆ ಗುದ್ದಿ ಅಪಘಾತಕ್ಕೀಡಾಗಿತ್ತು. ಮುಂಜಾನೆ 1.30ರ ಸುಮಾರಿಗೆ ಸಂಭವಿಸಿದ್ದ ಈ ಅಪಘಾತದ ಕುರಿತಾಗಿ ಹಲವು ಊಹಾಪೋಹಗಳು ಹುಟ್ಟಿಕೊಂಡಿದ್ದವು. 

ಹೊಟೆಲೊಂದರಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಆ ರೂಪದರ್ಶಿಗಳು ತ್ರಿಸೂರಿಗೆ ವಾಪಸಾಗುತ್ತಿದ್ದರು. ಅಪಘಾತ ನಡೆದ ಸ್ಥಳದಲ್ಲಿ ಸಿಸಿ ಟಿವಿ ಕಾರ್ಯಚರಿಸುತ್ತಿಲ್ಲವಾದ್ದರಿಂದ ಸುತ್ತಮುತ್ತಲಿನ ಅಂಗಡಿ ಮತ್ತಿತರ ಖಾಸಗಿಯವರ ಸಿಸಿ ಟಿವಿಗಳ ವಿಡಿಯೋಗಲನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 

ಅಪಘಾತ ನಡೆದ ಪ್ರದೇಶದಲ್ಲಿ ರಸ್ತೆ ಗುಂಡಿಗಳು ಸೇರಿದಂತೆ ಯಾವುದೇ ತೊಂದರೆ ಇರಲಿಲ್ಲ ಎಂದು ಕೇರಳ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಅಪಘಾತಕ್ಕೆ ವೇಗ ಚಾಲನೆಯೇ ಕಾರಣ ಇರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT