ಪುನೀತ್ ರಾಜ್ ಕುಮಾರ್, ಮುರುಘಾ ಶ್ರೀ 
ರಾಜ್ಯ

ಪುನೀತ್ ಗೆ ಮರಣೋತ್ತರವಾಗಿ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿ: ಶಿವಮೂರ್ತಿ ಮುರುಘಾ ಶರಣರು

ಕಳೆದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿಗೆ  ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಚಿತ್ರದುರ್ಗ: ಕಳೆದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿಗೆ  ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಪುನೀತ್ ರಾಜ್ ಕುಮಾರ್ 'ಬಾಲನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ  ಸಲ್ಲಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ನವೆಂಬರ್ 10 ರಂದು ಶರಣರು ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel