ಸಾಂದರ್ಭಿಕ ಚಿತ್ರ 
ರಾಜ್ಯ

ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಅಧಿಕಾರಿಗಳ ನಿಯೋಜನೆ

ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಬೆಂಗಳೂರು: ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೀಪಾವಳಿ ಹಬ್ಬದಂದು ಗೋಪೂಜೆ ಮಾಡುವಂತೆ ದೇಗುಲಗಳಿಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ದೇಗುಲಗಳಲ್ಲಿ ಗೋಪೂಜೆ ಮಾಡಲು ಸರ್ಕಾರದ ಆದೇಶಿಸಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆಗೆ ಸೂಚನೆ ಕೊಡಲಾಗಿದೆ.

ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಕೊಡಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳನ್ನು  ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.

ಗೋವುಗಳ ರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಮತ್ತು ಗೋಮಯ ಸೇರಿದಂತೆ ‘ಗೋವು ಉತ್ಪನ್ನ’ (ಹಸುವಿನ ಉತ್ಪನ್ನಗಳು) ಖರೀದಿಸಲು ಜನರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಚಿವ ಪ್ರಭು ಚವಾಣ್ ಹೇಳಿದರು.

ದೀಪಾವಳಿಗೆ 'ಗೋಮಯ' (ಹಸುವಿನ ಸಗಣಿಯಿಂದ ಮಾಡಿದ ದೀಪಗಳು) ಬಳಸುವಂತೆ ಜನರಿಗೆ ಮನವಿ ಮಾಡಿದರು. ಅಂತಹ ದೀಪಗಳು ಪರಿಸರ ಸ್ನೇಹಿಯಾಗಿವೆ ಹಾಗೂ ಬಳಕೆಯ ನಂತರ ಸಸ್ಯಗಳಿಗೆ ಗೊಬ್ಬರವಾಗಿ ಬಳಸಿಕೊಳ್ಳಬಹುದಾಗಿದೆ. ಇದರಿಂದ ರೈತರಿಗೆ ಹೆಚ್ಚುವರಿ ಆದಾಯ ಸಿಗುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!

Delhi Blast: 'ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು..? ಯಾರೂ ಗೂಟ ಹೊಡೆದು ಇರಲ್ಲ': ಸಚಿವ ಜಮೀರ್ ವಿಚಿತ್ರ ಪ್ರಶ್ನೆ

Cricket: 'ಯಾರೂ ನಮ್ಮನ್ನ ಕ್ಷಮಿಸೊಲ್ಲ.. ನಾವೇನೂ ರೊಬೋಟ್ ಗಳಲ್ಲ..': ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಆಕ್ರೋಶ!

Delhi Blast: 'ಆರೋಪಿಗಳ ಜೊತೆ ಯಾವುದೇ ಸಂಬಂಧವಿಲ್ಲ, ರಾಸಾಯನಿಕಗಳ ಸಂಗ್ರಹಿಸಿಲ್ಲ': Al-Falah ವಿವಿ ಸ್ಪಷ್ಟನೆ

Delhi blast: ಬಂಧಿತ ವೈದ್ಯರು ಜನವರಿ ತಿಂಗಳಲ್ಲಿ ಹಲವು ಬಾರಿ ಕೆಂಪು ಕೋಟೆ ಪ್ರದೇಶಕ್ಕೆ ಭೇಟಿ ನೀಡಿದ್ದರು!

SCROLL FOR NEXT