ತಮಿಳು ನಟ ಸೂರ್ಯ , ಶಿವರಾಜ್ ಕುಮಾರ್ 
ರಾಜ್ಯ

ವರ್ಷಧಾರೆ ನಡುವೆಯೂ ಅಪ್ಪು ಸಮಾಧಿ ಬಳಿಗೆ ಅಭಿಮಾನಿಗಳ ದಂಡು: ಬಿಕ್ಕಿ ಬಿಕ್ಕಿ ಅತ್ತ ತಮಿಳು ನಟ ಸೂರ್ಯ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಆರು ದಿನಗಳಾದರೂ ಅಭಿಮಾನಿಗಳ ನೋವು, ಹತಾಶೆ ಕಿಂಚಿತ್ತೂ ಕಡಿಮೆಯಾಗಿಲ್ಲ.  ಇಂದು ಕೂಡಾ ಅಭಿಮಾನಿಗಳ ದಂಡೆ ಅಪ್ಪು ಸಮಾಧಿ ಬಳಿಗೆ ಹರಿದುಬಂದಿತ್ತು.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಆರು ದಿನಗಳಾದರೂ ಅಭಿಮಾನಿಗಳ ನೋವು, ಹತಾಶೆ ಕಿಂಚಿತ್ತೂ ಕಡಿಮೆಯಾಗಿಲ್ಲ.  ಇಂದು ಕೂಡಾ ಅಭಿಮಾನಿಗಳ ದಂಡೆ ಅಪ್ಪು ಸಮಾಧಿ ಬಳಿಗೆ ಹರಿದುಬಂದಿತ್ತು. ಮಕ್ಕಳು, ವೃದ್ದರೂ, ಯುವಕರು ಸೇರಿದಂತೆ ಅಪಾರ ಸಂಖ್ಯೆಯಲ್ಲಿದ್ದ ಅಭಿಮಾನಿಗಳು ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಅಪ್ಪುಗೆ ಗೌರವ ಸಲ್ಲಿಸಿದರು.

ತಮಿಳಿನ ಸಿಂಗಂ ಖ್ಯಾತಿಯ ನಟ ಸೂರ್ಯ,  ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ಅಪ್ಪು ಜೊತೆಗಿನ ಒಡನಾಟ ನೆನೆದು ಕಣ್ಣೀರಿಟ್ಟರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯ, ಡಾ. ರಾಜ್ ಕುಮಾರ್ ಅವರ ಕಾಲದಿಂದಲೂ ತಮ್ಮ ಅಪ್ಪು ಕುಟುಂಬದ ನಡುವೆ ಅನ್ಯೂನ್ಯದ ಸಂಬಂಧವಿದೆ. ಪುನೀತ್ ಬಾಲ್ಯದಿಂದಲೂ ಸ್ನೇಹಿತರಾಗಿದ್ದರು. ನನಗೆ ನಾಲ್ಕು ತಿಂಗಳಿದ್ದಾಗ, ಅಪ್ಪುಗೆ ಏಳು ತಿಂಗಳು, ಡಾ. ರಾಜ್ ಕುಮಾರ್ ಅವರನ್ನು ನೋಡಿ ಬೆಳೆದಿದ್ದೇನೆ. ಅವರಂತೆ ಪುನೀತ್ ರಾಜ್ ಕುಮಾರ್ ಕೂಡಾ ಸಮಾಜ ಸೇವೆ ಮಾಡಿರುವುದನ್ನು ಕೇಳಿದ್ದೇನೆ.  ಪುನೀತ್ ರಾಜ್ ಕುಮಾರ್ ಯಾವಾಗಲೂ ನಮ್ಮ ಹೃದಯಗಳಲ್ಲಿ ಸದಾ ಇರುತ್ತಾರೆ. ಯಾವಾಗಲೂ ನಗುತ್ತಲೇ ಇರುತ್ತಾರೆ ಎಂದು ಭಾವುಕರಾದರು. 

ನಂತರ ಸಮಾಧಿಯಿಂದ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ  ಸೂರ್ಯ, ಪುನೀತ್ ಪುತ್ನಿ ಹಾಗೂ ಮಕ್ಕಳಿಗೆ ಸಾಂತ್ವನದ ಮಾತುಗಳು ಹೇಳಿದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT