ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಾಪಸ್: ಕುದುರೆ ರೇಸ್ ಗೆ ಅನುಮತಿ ನೀಡಿದ ಸರ್ಕಾರ

ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. 

ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ. 

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಕುದುರೆ ರೇಸ್ ನಂತಹ ಕಾರ್ಯಕ್ರಮಗಳಲ್ಲಿ ಆಸನದ ಸಾಮರ್ಥ್ಯದಷ್ಟು ಜನರು ಭಾಗವಹಿಸಬೇಕು, ಅಲ್ಲದೇ, ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದಿರುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ. 

ಏಪ್ರಿಲ್-ಅಂತ್ಯದಿಂದ ಎರಡನೇ ಅಲೆ ಪ್ರಾರಂಭದ ನಂತರ ಎರಡು ತಿಂಗಳು ಲಾಕ್ ಡೌನ್ ಅಂತ್ಯದ ವೇಳೆ ಜುಲೈ 3 ರಿಂದ ನೈಟ್ ಕರ್ಪ್ಯೂ ಆದೇಶವನ್ನು ಜಾರಿಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT