ಸಾಂದರ್ಭಿಕ ಚಿತ್ರ 
ರಾಜ್ಯ

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ವಶಕ್ಕೆ ಪಡೆದ ನಂತರ ಆತ ಇದ್ದ ಹೋಟೆಲ್ ಕೊಠಡಿಯನ್ನು ಪೊಲೀಸರು ಜಾಲಾಡಿದ್ದಾರೆ. ಈ ವೇಳೆ ಖಿನ್ನತೆ ನಿವಾರಕ ಮಾತ್ರೆಗಳು ದೊರೆತಿವೆ.

ಬೆಂಗಳೂರು: ಬಿಟ್ ಕಾಯಿನ್ ಹಗರಣ ಆರೋಪಿ ಶ್ರೀಕಿ ವಶಕ್ಕೆ ಪಡೆದ ನಂತರ ಆತ ಇದ್ದ ಹೋಟೆಲ್ ಕೊಠಡಿಯನ್ನು ಪೊಲೀಸರು ಜಾಲಾಡಿದ್ದಾರೆ. ಈ ವೇಳೆ ಖಿನ್ನತೆ ನಿವಾರಕ ಮಾತ್ರೆಗಳು ದೊರೆತಿವೆ ಎಂದು ಹೇಳಲಾಗಿದೆ.

ಖಿನ್ನತೆ ಶಮನಕ್ಕೆ ತೆಗೆದುಕೊಳ್ಳುವ ಆಲ್ಟ್ರಾಜೋಲಮ್ ಟ್ಯಾಬ್ಲೆಟ್ಸ್ ಪತ್ತೆಯಾಗಿವೆ. ಈ ಬಗ್ಗೆ ವಿಚಾರಿಸಿದಾಗ ತನಗೆ ಖಿನ್ನತೆ ಸಮಸ್ಯೆ ಇದೆ. ಅದರ ಶಮನಕ್ಕಾಗಿ ಮಾತ್ರೆ ತಗೆದುಕೊಳ್ಳುತ್ತಿದ್ದೇನೆ ಎಂದು ಶ್ರೀಕಿ ಹೇಳಿದ್ದಾನೆ ಎನ್ನಲಾಗಿದೆ. ಈತ ಮಾದಕವಸ್ತು ವ್ಯಸನಿಯೇ ಎಂಬುದರ ಕುರಿತೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜಕೀಯ ರಂಗದವರೂ ಭಾಗಿಯಾಗಿರುವ ಶಂಕೆ ಇರುವ ಕಾರಣ ಪ್ರಕರಣ ರಾಜ್ಯಾದ್ಯಂತ ಸುದ್ದಿಗೆ ಗ್ರಾಸವಾಗಿದೆ. ಇತ್ತೀಚಿಗಷ್ಟೆ ಭೀಮಾ ಜುವೆಲರಿ ಮಾಲೀಕರ ಪುತ್ರ ವಿಷ್ಣುಭಟ್ ಹೊತೆ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಬಂಧನವಾಗಿತ್ತು. ಈ ನಂತರ ಈತ ಬಳಸುತ್ತಿದ್ದ ಲ್ಯಾಪ್ ಟಾಪ್, ಪೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದು ಮಾಹಿತಿ ಸಂಗ್ರಹಣೆ ಕಾರ್ಯದಲ್ಲಿ ನಿರತರಾಗಿದ್ದಾರೆ. 

ಸ್ಟ್ರಾಂಗ್ ಪಾಸ್ ವರ್ಡ್ ಹಾಕಿರುವ ಮೊಬೈಲ್ ಪೋನ್ ಅನ್ನು ಶ್ರೀಕಿಯಿಂದ ಓಪನ್ ಮಾಡಿಸಿ ವಿಚಾರಣೆ ಮುಂದುವರಿಸಿದ್ದಾರೆ. ಆತನ ಬಳಿಯಿದ್ದ ಸಿಗರೇಟ್ ಪ್ಯಾಕ್ ಗಳನ್ನು ವಶಕ್ಕೆ ಪಡೆಯಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT