ರಾಜ್ಯ

ಕೆಎಸ್ಸಾರ್ಟಿಸಿ ಮಂಗಳೂರು - ಮಂತ್ರಾಲಯ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭ

ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 970 ರೂಪಾಯಿ ಆಗಿರುತ್ತದೆ. ಈ ಸೇವೆಯನ್ನು ಆನ್ ಲೈನ್ ಮುಖಾಂತರವೂ ಬುಕ್ ಮಾಡಬಹುದು.

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೇ 10ರಿಂದ ಮಂಗಳೂರಿನಿಂದ ಮಂತ್ರಾಲಯಕ್ಕೆ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಲಿದೆ. 

ಮಂಗಳೂರಿನಿಂದ-ಉಡುಪಿ-ಕುಂದಾಪುರ-ಅಂಪಾರು-ಸಿದ್ದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ-ಹೊಸಪೇಟೆ-ಕುಡುತಿನಿ-ಬಳ್ಳಾರಿ-ಆಲೂರು-ಅದೋನಿ ಮಾರ್ಗವಾಗಿ ಮಂತ್ರಾಲಯಕ್ಕೆ ಹಾಗೂ ಮಂತ್ರಾಲಯದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಈ ಬಸ್ ಕಾರ್ಯಾಚರಣೆ ಮಾಡಲಿದೆ.

ಈ ಬಸ್ಸು ಮಂಗಳೂರು ನಿಲ್ದಾಣದಿಂದ ಸಂಜೆ 6 ಗಂಟೆಗೆ ಹೊರಟು ಮರು ದಿನ ಬೆಳಗ್ಗೆ 8.30ಕ್ಕೆ ಮಂತ್ರಾಲಯಕ್ಕೆ ತಲುಪಲಿದೆ. ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 6.30 ಕ್ಕೆ ಹೊರಟು ಮರುದಿನ ಬೆಳಗ್ಗೆ 9ಕ್ಕೆ ಮಂಗಳೂರು ತಲುಪಲಿದೆ. 

ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 970 ರೂಪಾಯಿ ಆಗಿರುತ್ತದೆ. ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT