ರಾಜ್ಯ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ? ಇಂದು ಕ್ಯಾಬಿನೆಟ್ ಮೀಟಿಂಗ್

Nagaraja AB

ಬೆಂಗಳೂರು: ಸಿಂದಗಿಯಲ್ಲಿನ ಗೆಲುವು ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಹುಮ್ಮಸ್ಸು ನೀಡಿದ್ದರೆ, ಹಾನಗಲ್ ನಲ್ಲಿನ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿನ್ನಡೆಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ. 

ಇವತ್ತು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇನ್ನು ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನೂತನ ಮರಳು ನೀತಿ ಜಾರಿ, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಪರಾಮರ್ಶೆ ಕೂಡ ಇಂದು ಸಿಎಂ ಅಧ್ಯಕ್ಷತೆಯಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಲಿದೆ. 

ಅಲ್ಲದೆ, ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸುವುದು ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
 

SCROLL FOR NEXT