ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

'ಸ್ಮಾರ್ಟ್ ಸಿಟಿ' ಯೋಜನೆ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮೆಟ್ರೋ ಕಾಮಗಾರಿ ತ್ವರಿತಗೊಳಿಸಲು ಸೂಚನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ಮಿಷನ್ 2022 ರ ಪ್ರಗತಿ ಪರಿಶೀಲಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಉತ್ತಮ ರಸ್ತೆ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ಮಿಷನ್ 2022 ರ ಪ್ರಗತಿ ಪರಿಶೀಲಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಉತ್ತಮ ರಸ್ತೆ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. 

ಸ್ಮಾರ್ಟ್ ಸಿಟಿ ಯೋಜನೆಗಾಗಿ ಪ್ರತ್ಯೇಕ ಸಭೆಯೊಂದನ್ನು ನಡೆಸುವುದಾಗಿ ತಿಳಿಸಿದ ಸಿಎಂ, ನಮ್ಮ ಮೆಟ್ರೋ ರೈಲು ಯೋಜನೆ ನಿಗದಿಯಂತೆ ಒಂದು ವರ್ಷದೊಳಗೆ ಮುಕ್ತಾಯಗೊಳ್ಳಬೇಕು, ಕಾಮಗಾರಿ ತ್ವರಿತಗೊಳಿಸಲು ಮತ್ತು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಉಪನಗರ ರೈಲು ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, 15.40 ಕಿಮೀ ದೂರವನ್ನು ಒಳಗೊಂಡಿದೆ, ಇದಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಕೆಐಎಡಿಬಿ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಬೊಮ್ಮಾಯಿ ಪ್ರಸ್ತಾಪಿಸಿದರು.

100 ಜಲಮಾರ್ಗ ಯೋಜನೆಯಡಿ ಒಳಚರಂಡಿ ನೀರು ಕಾಲುವೆಗಳಿಗೆ ಬರದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. 128 ಕೋಟಿ ಅಂದಾಜು ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿಯನ್ನು ಜನವರಿ ಅಂತ್ಯದೊಳಗೆ  ಪೂರ್ಣಗೊಳಿಸಬೇಕು. ಕೆರೆಗಳನ್ನು ಅಭಿವೃದ್ಧಿಪಡಿಸಿ ಸುತ್ತಲೂ ಹಸಿರು ಬೇಲಿ ಹಾಕುವಂತೆ ಅಧಿಕಾರಿಗಳಿಗೆ ಸಿಎಂ ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT