ಹಾಜಬ್ಬ, ವಿಜಯ್​ ಸಂಕೇಶ್ವರ್​ಗೆ ಪದ್ಮಶ್ರೀ ಪ್ರಶಸ್ತಿ 
ರಾಜ್ಯ

ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್​ ಸಂಕೇಶ್ವರ್​ಗೆ ಪದ್ಮಶ್ರೀ ಪ್ರಶಸ್ತಿ

ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

ನವದೆಹಲಿ: ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

ಕನ್ನಡಿಗ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಹಾಗೂ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.

ದಕ್ಷಿಣ ಕನ್ನಡದ ಅಕ್ಷರ ಸಂತ’ ಹರೇಕಳ ಹಾಜಬ್ಬ, ಕನ್ನಡತಿ ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್, ಪರಿಸರ ಪ್ರೇಮಿ ತುಳಸಿ ಗೋವಿಂದೇಗೌಡ, ಮಾಜಿ ಹಾಕಿ ಪಟು ಎಂಪಿ ಗಣೇಶ್​​ ಮತ್ತು ಉದ್ಯಮಿ ವಿಜಯ್​ ಸಂಕೇಶ್ವರ್​  ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.

ವಿವಿಧ ಕ್ಷೇತ್ರದ 119 ಸಾಧಕರಿಗೆ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಪ್ರಖ್ಯಾತ ಗಾಯಕ ಎಸ್ .ಪಿ. ಬಾಲ ಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಯಿತು.

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪ್ರಶಸ್ತಿ ಸ್ವೀಕರಿಸಿದರು.

ಒಲಿಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪದ್ಮಭೂಷಣ ಪ್ರಶಸ್ತಿ, ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ, ಪ್ರಶಸ್ತಿ ನೀಡಲಾಯಿತು.ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲಾದ ಗಣ್ಯರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT