ಸಂಗ್ರಹ ಚಿತ್ರ 
ರಾಜ್ಯ

ವೇತನ ಪರಿಷ್ಕರಣೆಗೆ ಆಗ್ರಹ: ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದ ಕೆಎಸ್'ಜಿಇಎ!

ಸರ್ಕಾರದಿಂದ ನೇಮಕಗೊಂಡಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕೆಎಸ್‌ಜಿಇಎ) 21 ದಿನಗಳ ಗಡುವು ನೀಡಿದ್ದು,  ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿವೆ.

ಬೆಂಗಳೂರು: ಸರ್ಕಾರದಿಂದ ನೇಮಕಗೊಂಡಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕೆಎಸ್‌ಜಿಇಎ) 21 ದಿನಗಳ ಗಡುವು ನೀಡಿದ್ದು,  ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿವೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಭಾನುವಾರ ನಗರದ ಎನ್‌ಜಿಒ ಹಾಲ್‌ನಲ್ಲಿ ನಡೆದ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ಈ ಸಂಬಂಧ ಒಕ್ಕೊರಲ ನಿರ್ಣಯ ಕೈಗೊಂಡಿದ್ದು, ಸುಮಾರು 10 ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ.

ಸಭೆ ಬಳಿಕ ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಅವರು, 20 ವರ್ಷಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸದಿದ್ದರೆ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಗಳನ್ನು ಬಹಿಷ್ಕರಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಹೇಳಿದ್ದಾರೆ.

ಬೇಡಿಕೆಗಳಲ್ಲಿ ಬಡ್ತಿ, ವೇತನ ಪರಿಷ್ಕರಣೆ ಮತ್ತು ವರ್ಗಾವಣೆ ನೀತಿ ಸೇರಿವೆ. "ಸರ್ಕಾರದೊಂದಿಗೆ ಹಲವು ಬಾರಿ ಮನವಿ ಪತ್ರಗಳನ್ನು ಸಲ್ಲಿಸಿದರೂ ಮತ್ತು ಹಲವಾರು ಸುತ್ತಿನ ಮಾತುಕತೆಗಳ ಹೊರತಾಗಿಯೂ ಈ ವರೆಗೂ ಯಾವುದೇ ಬೇಡಿಕೆಗಳೂ ಈಡೇರಿಲ್ಲ. ಆದ್ದರಿಂದ, ತರಗತಿಗಳನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಮುಂದಿಟ್ಟಿರುವ 10 ಬೇಡಿಕೆಗಳ ಪೈಕಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ (1ರಿಂದ 5ನೇ ತರಗತಿ) ಶಿಕ್ಷಕರ ಹಿಂದಿನ ಸೇವಾ ಜ್ಯೇಷ್ಠತೆ ಪರಿಗಣಿಸಿ 6ರಿಂದ 8ನೇ ತರಗತಿಗೆ ಬೋಧನೆ ಮಾಡಲು ಮೇಲ್ದರ್ಜೆ ಅಥವಾ ವಿಲೀನಗೊಳಿಸಲು ಆದೇಶಿಸಬೇಕು. 1998-1999ರಲ್ಲಿ ಸೇವೆಗೆ ಸೇರಿ ನಂತರ ಸುಪ್ರೀಂ ಕೋರ್ಟ್‌ ಆದೇಶದಿಂದ ಸೇವೆಯಿಂದ ವಜಾಗೊಂಡಿದ್ದ 4000 ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು 2003ರಲ್ಲಿ ಮರು ನೇಮಕಗೊಂಡಿದ್ದು, ಅವರೆಲ್ಲರಿಗೂ ಹಿಂದಿನ ಸೇವೆಯನ್ನು ಪರಿಗಣಿಸಿ ಕಾಲ್ಪನಿಕ ವೇತನ ನಿಗದಿಪಡಿಸಬೇಕು ಎಂಬುದು ಪ್ರಮುಖವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!