ಜ್ಯೋತಿ ರಾಜ್ 
ರಾಜ್ಯ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: 'ಇನ್ಕ್ರೆಡಿಬಲ್ ಮಂಕಿ ಮ್ಯಾನ್' ಜ್ಯೋತಿ ರಾಜ್'ಗೆ ನೆರವು ನೀಡಲು ಸರ್ಕಾರ ಮುಂದು!

ಚಿತ್ರದುರ್ಗದಲ್ಲಿ ಕೃತಕ ಗೋಡೆ ನಿರ್ಮಿಸುವ ಇನ್ಕ್ರೆಡಿಬಲ್ ಮಂಕಿ ಮ್ಯಾನ್' ಜ್ಯೋತಿ ರಾಜ್' ಅವರ ಕನಸ್ಸನ್ನು ನನಸು ಮಾಡಲು ನೆರವು ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ಶಿವಮೊಗ್ಗ: ಚಿತ್ರದುರ್ಗದಲ್ಲಿ ಕೃತಕ ಗೋಡೆ ನಿರ್ಮಿಸುವ ಇನ್ಕ್ರೆಡಿಬಲ್ ಮಂಕಿ ಮ್ಯಾನ್' ಜ್ಯೋತಿ ರಾಜ್' ಅವರ ಕನಸ್ಸನ್ನು ನನಸು ಮಾಡಲು ನೆರವು ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ಈ ಹಿಂದೆ ದಿ ನ್ಯೂ ಸಂಡೆ ಎಕ್ರ್'ಪ್ರೆಸ್  ಜ್ಯೋತಿ ರಾಜ್ ಅವರ ಕುರಿತಾಗಿ ವರದಿಯೊಂದನ್ನು ಪ್ರಕಟಿಸಿತ್ತು. ವರದಿಯಲ್ಲಿ ಚಿತ್ರದುರ್ಗದಲ್ಲಿ ಕೃತಕ ಗೋಡೆ ನಿರ್ಮಿಸುವ ಜ್ಯೋತಿರಾಜ್ ಅವರ ಕನಸ್ಸನ್ನು ತಿಳಿಸಲಾಗಿತ್ತು.

ಸರ್ಕಾರ ಭೂಮಿಯೊಂದನ್ನು 20 ವರ್ಷಗಳ ಕಾಲ ಗುತ್ತಿಗೆ ನೀಡಿದರೆ, ಅಲ್ಲಿ ಕೃತಕ ಗೋಡೆಯನ್ನು ನಿರ್ಮಿಸಿ, ರಾಷ್ಟ್ರೀಯ ಮತ್ತು ಒಲಿಂಪಿಕ್ ಕ್ರೀಡಾಕೂಟಗಳಿಗೆ ಯುವಕರಿಗೆ ತರಬೇತಿ ನೀಡುತ್ತೇನೆಂದು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.

ಕಳೆದ 15 ವರ್ಷಗಳಿಂದ ಚಿತ್ರದುರ್ಗ ಕೋಟೆಯ ಗೋಡೆಗಳನ್ನು ನೋಡಿ, ಹತ್ತಿ ಬೆಳೆದಿದ್ದೇನೆ, ನಾನು ರಾಜ್ಯ ಮತ್ತು ದೇಶದ ವಿವಿಧ ಭಾಗಗಳಿಂದ ಬರುವ ಜನರನ್ನು ಇಲ್ಲಿ ರಂಜಿಸುತ್ತೇನೆ. ಚಿತ್ರದುರ್ಗದಲ್ಲಿ ಗೋಡೆ ನಿರ್ಮಾಣವಾದರೆ ಜಿಲ್ಲೆ ಜನಮನ ಸೆಳೆಯಲಿದ್ದು, ಯುವಕರು ಇಲ್ಲಿ ತರಬೇತಿ ಪಡೆಯಬಹುದು ಎಂದು ಹೇಳಿದ್ದರು.

ವರದಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅವರು, ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮನ್ನು ನಮ್ಮ ಕಚೇರಿಗೆ ಆಹ್ವಾನಿಸಲು ನಮಗೆ ಸಂತೋಷವಾಗುತ್ತಿದೆ. ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡಲು ಸಿದ್ಧರಿದ್ದೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT