ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರಾಡ್ ನಿಂದ ಹೊಡೆದು ಪತಿಯನ್ನು ಹತ್ಯೆಗೈದ ಪತ್ನಿ! ಲೈಂಗಿಕ ದುರ್ನಡತೆಯ ಆರೋಪ

ಪತ್ನಿಯೊಬ್ಬಳು ತನ್ನ 46ರ ಹರಯದ ರಿಯಲ್ ಎಸ್ಟೇಟ್ ಉದ್ಯಮಿ ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಘಟನೆ  ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಬೆಂಗಳೂರು: ಪತ್ನಿಯೊಬ್ಬಳು ತನ್ನ 46ರ ಹರಯದ ರಿಯಲ್ ಎಸ್ಟೇಟ್ ಉದ್ಯಮಿ ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಘಟನೆ  ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ನಂತರ ಪೊಲೀಸರ ಮುಂದೆ ಮಹಿಳೆ ಹಾಜರಾಗಿದ್ದು, ತನ್ನ ಪತಿ ಮೇಲೆ ಲೈಂಗಿಕ ದುರ್ನಡತೆಯ ಆರೋಪ ಮಾಡಿದ್ದಾಳೆ.

ಮೃತರನ್ನು ಹಾರೋಕ್ಯಾತನಹಳ್ಳಿ ನಿವಾಸಿ ಸ್ವಾಮಿ ರಾಜ್ ಎಂದು ಗುರುತಿಸಲಾಗಿದೆ. ಈತ ಮೊದಲ ಪತ್ನಿಯಿಂದ ಬೇರ್ಪಟ್ಟು ಆರೋಪಿಯನ್ನು ಮದುವೆಯಾಗಿದ್ದ. ಶನಿವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ತನ್ನ ಸಂಬಂಧಿಕರೊಬ್ಬರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ರಾಜ್ ಒತ್ತಾಯಿಸಿದ ನಂತರ ದಂಪತಿ ನಡುವೆ ಜಗಳ ನಡೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ ಈ ರೀತಿ ಕೆಲ ದಿನಗಳಿಂದ ಒತ್ತಡ ಹಾಕುತ್ತಿದ್ದ ಎನ್ನಲಾಗಿದೆ.  ಇದರಿಂದ ಕೋಪಗೊಂಡ ಪತ್ನಿ ಶನಿವಾರ ಮಲಗಿದ್ದ ರಾಜ್ ಅವರ ತಲೆಗೆ ಕಬ್ಬಿಣದ ರಾಡ್ ತೆಗೆದುಕೊಂಡು ಹೊಡೆದಿದ್ದಾಳೆ. ಬಳಿಕ ಮಾದನಾಯಕನಹಳ್ಳಿ ಠಾಣೆಗೆ ತೆರಳಿ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಮೃತಪಟ್ಟ ರಾಜ್ ಹಾಗೂ  ಆತನ ಎರಡನೇ ಪತ್ನಿ 10 ವರ್ಷಗಳ ಹಿಂದೆ ಮದುವೆಯಾಗಿದ್ದು, ಆಗಾಗ್ಗೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಗಳವಾಡುತ್ತಿದ್ದರು, ಇದು ಕೊಲೆಯ ಹಿಂದಿನ ನಿಜವಾದ ಉದ್ದೇಶ ಎಂದು ರಾಜ್ ನ ಮೊದಲ ಹೆಂಡತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಆಕೆ ಕೇಸ್ ದಾಖಲಿಸಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಬದಲಿಗೆ 'ಸಮೋಸಾ'ಗಳ ಬಗ್ಗೆ ಮಾತನಾಡುತ್ತಿದ್ದ ರಾಘವ್ ಚಡ್ಡಾ: ಎಎಪಿ ಆರೋಪ

'ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ': ರಾಜ್ಯಸಭೆ ಉಪನಾಯಕ ಸ್ಥಾನದಿಂದ ಕೆಳಗಿಳಿಸಿದ ಬಳಿಕ ರಾಘವ್ ಚಡ್ಡಾ ಪ್ರತಿಕ್ರಿಯೆ

West Asia Conflict: ಇರಾನ್-ಇಸ್ರೇಲ್ ಯುದ್ಧದ ನಡುವೆ ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್, ಸೀಮೆಎಣ್ಣೆ ಬೆಲೆ ಏರಿಕೆ!

ಇರಾನ್‌ ಯುದ್ಧದ ನಡುವೆ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ: ಸೇನಾ ಮುಖ್ಯಸ್ಥರನ್ನು ಕಿತ್ತೆಸೆದ ಟ್ರಂಪ್ ಆಡಳಿತ!

West Asia war: ಹಾರ್ಮುಜ್ ಬಿಕ್ಕಟ್ಟು ತೀವ್ರ; ನಾವಿಕರನ್ನು ಕಳೆದುಕೊಂಡ ಏಕೈಕ ದೇಶ ಭಾರತ, ನಿರ್ಬಂಧ ರಹಿತ ಸಂಚಾರಕ್ಕೆ ಒತ್ತಾಯ..!

SCROLL FOR NEXT