ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರಾಡ್ ನಿಂದ ಹೊಡೆದು ಪತಿಯನ್ನು ಹತ್ಯೆಗೈದ ಪತ್ನಿ! ಲೈಂಗಿಕ ದುರ್ನಡತೆಯ ಆರೋಪ

ಪತ್ನಿಯೊಬ್ಬಳು ತನ್ನ 46ರ ಹರಯದ ರಿಯಲ್ ಎಸ್ಟೇಟ್ ಉದ್ಯಮಿ ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಘಟನೆ  ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಬೆಂಗಳೂರು: ಪತ್ನಿಯೊಬ್ಬಳು ತನ್ನ 46ರ ಹರಯದ ರಿಯಲ್ ಎಸ್ಟೇಟ್ ಉದ್ಯಮಿ ಪತಿಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಘಟನೆ  ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ನಂತರ ಪೊಲೀಸರ ಮುಂದೆ ಮಹಿಳೆ ಹಾಜರಾಗಿದ್ದು, ತನ್ನ ಪತಿ ಮೇಲೆ ಲೈಂಗಿಕ ದುರ್ನಡತೆಯ ಆರೋಪ ಮಾಡಿದ್ದಾಳೆ.

ಮೃತರನ್ನು ಹಾರೋಕ್ಯಾತನಹಳ್ಳಿ ನಿವಾಸಿ ಸ್ವಾಮಿ ರಾಜ್ ಎಂದು ಗುರುತಿಸಲಾಗಿದೆ. ಈತ ಮೊದಲ ಪತ್ನಿಯಿಂದ ಬೇರ್ಪಟ್ಟು ಆರೋಪಿಯನ್ನು ಮದುವೆಯಾಗಿದ್ದ. ಶನಿವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ತನ್ನ ಸಂಬಂಧಿಕರೊಬ್ಬರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ರಾಜ್ ಒತ್ತಾಯಿಸಿದ ನಂತರ ದಂಪತಿ ನಡುವೆ ಜಗಳ ನಡೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ ಈ ರೀತಿ ಕೆಲ ದಿನಗಳಿಂದ ಒತ್ತಡ ಹಾಕುತ್ತಿದ್ದ ಎನ್ನಲಾಗಿದೆ.  ಇದರಿಂದ ಕೋಪಗೊಂಡ ಪತ್ನಿ ಶನಿವಾರ ಮಲಗಿದ್ದ ರಾಜ್ ಅವರ ತಲೆಗೆ ಕಬ್ಬಿಣದ ರಾಡ್ ತೆಗೆದುಕೊಂಡು ಹೊಡೆದಿದ್ದಾಳೆ. ಬಳಿಕ ಮಾದನಾಯಕನಹಳ್ಳಿ ಠಾಣೆಗೆ ತೆರಳಿ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಮೃತಪಟ್ಟ ರಾಜ್ ಹಾಗೂ  ಆತನ ಎರಡನೇ ಪತ್ನಿ 10 ವರ್ಷಗಳ ಹಿಂದೆ ಮದುವೆಯಾಗಿದ್ದು, ಆಗಾಗ್ಗೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಗಳವಾಡುತ್ತಿದ್ದರು, ಇದು ಕೊಲೆಯ ಹಿಂದಿನ ನಿಜವಾದ ಉದ್ದೇಶ ಎಂದು ರಾಜ್ ನ ಮೊದಲ ಹೆಂಡತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಆಕೆ ಕೇಸ್ ದಾಖಲಿಸಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

SCROLL FOR NEXT