ಸಾಂದರ್ಭಿಕ ಚಿತ್ರ 
ರಾಜ್ಯ

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿಗೆ ನ್ಯಾಯಾಂಗ ಬಂಧನ

ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನೊಬ್ಬ ಆರೋಪಿ ವಿಷ್ಣು ಭಟ್‌ನನ್ನು ಮುಂದಿನ 4 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಜೀವನ್‌ಬಿಮಾನಗರ ಠಾಣೆ ವ್ಯಾಪ್ತಿಯ ಹೋಟೆಲ್‌ನಲ್ಲಿ ವಾಸವಿದ್ದ ಆರೋಪಿಗಳು, ಸಿಬ್ಬಂದಿ ಹಾಗೂ ವ್ಯವಸ್ಥಾಪಕನ ಮೇಲೆ ಹಲ್ಲೆ ಮಾಡಿದ್ದರು. ವ್ಯವಸ್ಥಾಪಕ ನೀಡಿದ್ದ ದೂರಿನಡಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆರೋಪಿಗಳು ಮಾದಕ ದ್ರವ್ಯ ಸೇವಿಸಿದ್ದು ಗೊತ್ತಾಗಿತ್ತು.

ಎನ್‌ಡಿಪಿಎಸ್ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರ ಮನೆಗಳ ಮೇಲೂ ದಾಳಿ ಮಾಡಿದ್ದರು. ಡ್ರಗ್ಸ್ ಸಹ ಪತ್ತೆ ಹಚ್ಚಿದ್ದರು. ‘ಆರೋಪಿ ವಿಷ್ಣು ಭಟ್‌ನ ಇಂದಿರಾನಗರದ ಮನೆಯಲ್ಲಿ ಡ್ರಗ್ಸ್ ಸಿಕ್ಕಿದೆ. ಅದನ್ನು ಆತ ಎಲ್ಲಿಂದ ತರಿಸಿದ್ದ? ಡ್ರಗ್ಸ್ ಪೂರೈಸಿದ್ದ ಪೆಡ್ಲರ್ ಯಾರು? ಎಂಬುದನ್ನು ಪತ್ತೆ ಮಾಡಬೇಕಿದೆ. ಹೀಗಾಗಿ, ಆತನನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿತ್ತು. ನಮ್ಮ ಮನವಿಯನ್ನು ನ್ಯಾಯಾಲಯ ಮನ್ನಿಸಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ
    
ವಿಷ್ಣು ಭಟ್‌ ಜೊತೆ ಪಾರ್ಟಿಗಳಲ್ಲಿ ಪಾಲ್ಗೊಂಡು ಡ್ರಗ್ಸ್ ಸೇವಿಸುತ್ತಿದ್ದವರ ಹಾಗೂ ಡ್ರಗ್ಸ್ ಮಾರುತ್ತಿದ್ದವರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಪಟ್ಟಿ ಸಿದ್ಧಪಡಿಸಿ ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಶ್ರೀಕಿ ಈ ಹಿಂದೆ ಮಾದಕ ದ್ರವ್ಯ ಪ್ರಕರಣದಲ್ಲಿ ಭಾಗಿಯಾಗಿದ್ದು, ವಿವರವಾದ ತನಿಖೆಯಿಂದ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ನಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಆತನಿಂದ 9 ಕೋಟಿ ರೂಪಾಯಿ ಮೌಲ್ಯದ ಬಿಟ್‌ಕಾಯಿನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT