ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ಆರ್ಭಟ ಇಂದು ಮತ್ತೆ ಹೆಚ್ಚಳವಾಗಿದ್ದು, ಮೊನ್ನೆಗಿಂತ ನಿನ್ನೆ, ನಿನ್ನೆಗಿಂತ ಹೊಸ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.
ರಾಜ್ಯದಲ್ಲಿ ನಿನ್ನೆ ವರದಿಯಾದ ಸೋಂಕು ಪ್ರಕರಣಗಳ ವಿವರ:
ರಾಜ್ಯದಲ್ಲಿ ನಿನ್ನೆ ಕೊರೋನಾದಿಂದ ನಾಲ್ವರು ಸಾವು: ಬೆಂಗಳೂರಿನಲ್ಲಿ 187 ಸೇರಿ 293 ಮಂದಿಗೆ ಪಾಸಿಟಿವ್!
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 328 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ 29,90,856ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 176 ಹೊಸ ಪ್ರಕರಣಗಳು ವರದಿಯಾಗಿದ್ದು, ಹಾಸನದಲ್ಲಿ 29, ಮೈಸೂರಿನಲ್ಲಿ 15, ಬೆಂಗಳೂರು ಗ್ರಾಮಾಂತರ ಮತ್ತು ಶಿವಮೊಗ್ಗದಲ್ಲಿ ತಲಾ 11 ಹೊಸ ಪ್ರಕರಣಗಳು ವರದಿಯಾಗಿದೆ. ಬಾಗಲಕೋಟೆ, ಬೀದರ್, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ.
ರಾಜ್ಯದಲ್ಲಿ ಮೊನ್ನೆವರದಿಯಾದ ಸೋಂಕು ಪ್ರಕರಣಗಳ ವಿವರ
ರಾಜ್ಯದಲ್ಲಿ ಮೊನ್ನೆ ಕೊರೋನಾದಿಂದ 6 ಸಾವು, ಬೆಂಗಳೂರಿನಲ್ಲಿ 159 ಸೇರಿ 283 ಮಂದಿಗೆ ಪಾಸಿಟಿವ್
ಅಂತೆಯೇ ಇಂದು 9 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,131ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 247 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೋವಿಡ್ ನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 29,44,669ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 8027 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿನ ಪಾಸಿಟಿವಿಟಿ ದರ ಶೇ.0.27ರಷ್ಟು ಮತ್ತು ಕೋವಿಡ್ ಮರಣ ಪ್ರಮಾಣ ದರ ಶೇ.2.74ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಆತಂಕ: ಮಹಾರಾಷ್ಟ್ರ, ಮುಂಬೈನಿಂದ ಬರುವವರಿಗೆ ಹೊಸ ಮಾರ್ಗಸೂಚಿ ಪ್ರಕಟ
ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಕೆ: ಕೊರೋನಾ ಮೇಲೆ ಹಿಡಿತ ಕಳೆದುಕೊಳ್ಳುವ ಆತಂಕ?
ಶಾಲೆಗಳು ಕೋವಿಡ್ ಕ್ಲಸ್ಟರ್ ಹೊಂದಿರುತ್ತವೆ, ಆದರೆ ಆತಂಕಬೇಡ: ತಜ್ಞರ ಸಲಹೆ
ನ.8ರಿಂದ ಎಲ್ಕೆಜಿ, ಯುಕೆಜಿ ಆರಂಭ, ಕೋವಿಡ್ ಸುರಕ್ಷತಾ ಕ್ರಮ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ: ಬಿ.ಸಿ ನಾಗೇಶ್
ಗದಗದಲ್ಲಿ ಗರ್ಭಪಾತಗಳ ಸಂಖ್ಯೆ ಹೆಚ್ಚಳ: ಕೋವಿಡ್ ಕಾರಣವೆಂದ ವೈದ್ಯರು