ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಮೂರನೇ ಅಲೆಯ ಆಂತಕ: ಮೂರನೇ ಡೋಸ್ ಮೊರೆ ಹೋದ ಬೆಂಗಳೂರಿನ ಹಲವು ವೈದ್ಯರು, ನರ್ಸ್ ಗಳು

ಕೋವಿಡ್-19  ಲಸಿಕೆಯ ಮೂರನೇ ಡೋಸ್ ನ್ನು ಜನತೆಗೆ ನೀಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪರಿಶೀಲನೆ ನಡೆಸುತ್ತಿರುವುದರ ಮಧ್ಯೆ ಕರ್ನಾಟಕದಲ್ಲಿ ಆರೋಗ್ಯ ವಲಯ ಕಾರ್ಯಕರ್ತರು ಮತ್ತು ವೈದ್ಯರು ಸದ್ದಿಲ್ಲದೆ 3ನೇ ಡೋಸ್ ನ್ನು ತಾವಾಗಿಯೇ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೋವಿಡ್-19  ಲಸಿಕೆಯ ಮೂರನೇ ಡೋಸ್ ನ್ನು ಜನತೆಗೆ ನೀಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪರಿಶೀಲನೆ ನಡೆಸುತ್ತಿರುವುದರ ಮಧ್ಯೆ ಕರ್ನಾಟಕದಲ್ಲಿ ಆರೋಗ್ಯ ವಲಯ ಕಾರ್ಯಕರ್ತರು ಮತ್ತು ವೈದ್ಯರು ಸದ್ದಿಲ್ಲದೆ 3ನೇ ಡೋಸ್ ನ್ನು ತಾವಾಗಿಯೇ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹಲವು ವೈದ್ಯರು ಈ ವರ್ಷದ ಆರಂಭದಲ್ಲಿ ಜನವರಿಯಲ್ಲಿ ಮೊದಲ ಡೋಸ್ ಪಡೆದುಕೊಂಡಿದ್ದರೆ ಎರಡನೇ ಡೋಸ್ ನ್ನು 8 ತಿಂಗಳ ಹಿಂದೆ ಪಡೆದುಕೊಂಡಿದ್ದಾರೆ. ಆದರೆ ಕೋವಿಡ್-19 ಲಸಿಕೆ ಪಡೆದವರಲ್ಲಿ ಸಹ ಸೋಂಕು ಕಾಣಿಸಿಕೊಂಡು ಐಸಿಯು ದಾಖಲಾತಿ, ಸಾವು ನೋವುಗಳು ಕಾಣಿಸಿಕೊಂಡಿರುವುದು ಸಹಜವಾಗಿ ಜನರಲ್ಲಿ ಅದರಲ್ಲೂ ವೈದ್ಯರು, ಆರೋಗ್ಯ ವಲಯ ಕಾರ್ಯಕರ್ತರಲ್ಲಿ ಆತಂಕ ಉಂಟಾಗಿದೆ. 

ಕೇವಲ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳ ವೈದ್ಯರು ಸಹ ಬೂಸ್ಟರ್ ಡೋಸ್ ಗಳನ್ನು ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ ಸಿ ಎನ್ ಮಂಜುನಾಥ್, ಇದು ತಮ್ಮ ಗಮನಕ್ಕೆ ಬಂದಿದೆ ಎನ್ನುತ್ತಾರೆ.

ಹಲವರು ಭಯದಿಂದ ಕೋವಿಡ್ ಮೂರನೇ ಡೋಸ್ ಪಡೆಯುತ್ತಿದ್ದಾರೆ. ಕೋವಿಡ್-19 2 ಡೋಸ್ ಪಡೆದ ನಂತರ ದೇಹದಲ್ಲಿ ಪ್ರತಿಕಾಯ ಮಟ್ಟವನ್ನು ಪರೀಕ್ಷಿಸಿ ಏನಾದರೂ ಕುಂದುಕೊರತೆ ಕ್ಷೀಣಿಸುವುದು ಕಂಡುಬಂದರೆ ಮೂರನೇ ಡೋಸ್ ಗೆ ಮೊರೆ ಹೋಗುತ್ತಾರೆ ಎಂದರು.

ಎರಡನೇ ಡೋಸ್ ಪಡೆದುಕೊಳ್ಳದವರಿಂದ ಅಪಾಯ ಹೆಚ್ಚು, ಅವರಲ್ಲಿ ಸೋಂಕು ಕಾಣಿಸಿಕೊಂಡು ಕೆಲವೊಮ್ಮೆ ಐಸಿಯುಗೆ ಸಹ ದಾಖಲಾಗಬೇಕಾಗುತ್ತದೆ. ಈ ಬಗ್ಗೆ ವೈದ್ಯರಿಗೆ ಆತಂಕವುಂಟಾಗುತ್ತದೆ. ಬೂಸ್ಟರ್ ತೆಗೆದುಕೊಳ್ಳುವುದರಿಂದ ಅಪಾಯವೇನೂ ಇಲ್ಲ ಆದರೆ ಈ ಬಗ್ಗೆ ನೀತಿಯಿಲ್ಲ ಹೀಗಾಗಿ ಮೂರನೇ ಡೋಸ್ ಪಡೆಯಲು ಈಗಲೇ ಮುಂದಾಗಬಾರದು ಎಂದು ಡಾ ಸಿ ಎನ್ ಮಂಜುನಾಥ್ ಹೇಳುತ್ತಾರೆ.

ನನ್ನ ದೇಹದ ಪ್ರತಿಕಾಯವನ್ನು ಪರೀಕ್ಷಿಸಿದಾಗ ಕ್ಷೀಣಿಸತೊಡಗಿದೆ ಎನಿಸಿ ಮೂರನೇ ಡೋಸ್ ಪಡೆದುಕೊಂಡೆ ಎಂದು ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯ ಮುಖ್ಯ ನರ್ಸ್ ಹೇಳುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT