ಕೃಷಿಮೇಳದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 
ರಾಜ್ಯ

ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 

ನಮ್ಮ ದೇಶ ಕೃಷಿ ಆಧಾರಿತ ರಾಷ್ಟ್ರವಾಗಿದೆ. ಕೃಷಿ ಸಂಬಂಧಿತ ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿಯಾಗಿದೆ. ಮೇಳ ಆಯೋಜನೆಯಿಂದಾಗಿ ರೈತರು ಮತ್ತು ನಾಗರಿಕರು ಅನೇಕ ಮಹತ್ವಪೂರ್ಣ ಮಾಹಿತಿಯೊಂದಿಗೆ, ಅನುಕೂಲ ಪಡೆಯಲಿದ್ದಾರೆ ಎಂದು ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಬೆಂಗಳೂರು: ನಮ್ಮ ದೇಶ ಕೃಷಿ ಆಧಾರಿತ ರಾಷ್ಟ್ರವಾಗಿದೆ. ಕೃಷಿ ಸಂಬಂಧಿತ ಜ್ಞಾನಭಿವೃದ್ಧಿಗಾಗಿ ಕೃಷಿ ಮೇಳ ಸಹಕಾರಿಯಾಗಿದೆ. ಮೇಳ ಆಯೋಜನೆಯಿಂದಾಗಿ ರೈತರು ಮತ್ತು ನಾಗರಿಕರು ಅನೇಕ ಮಹತ್ವಪೂರ್ಣ ಮಾಹಿತಿಯೊಂದಿಗೆ, ಅನುಕೂಲ ಪಡೆಯಲಿದ್ದಾರೆ ಎಂದು ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ನಗರದ ಜಿಕೆವಿಕೆ ಆವರಣದಲ್ಲಿ ಇಂದು ಆಯೋಜಿಸಲಾಗಿದ್ದ ಭೌತಿಕ ಮತ್ತು ವರ್ಚುವಲ್  "ಕೃಷಿ ಮೇಳ-2021" ಸಮಾರೋಪ ಸಮಾರಂಭದಲ್ಲಿ ಏಳು ಮಂದಿ ಕೃಷಿ ಸಾಧಕರಿಗೆ ರಾಜ್ಯಮಟ್ಟದ ಕೃಷಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ರಾಜ್ಯಪಾಲರು, ನೆರದಿದ್ದ ಸರ್ವರಿಗೂ ಕನ್ನಡದಲ್ಲಿ ಅಭಿನಂದನೆಗಳನ್ನು ಸಲ್ಲಿಸಿ, ಕನ್ನಡ ಕಲಿಯುತ್ತಿರುವುದರ ಬಗ್ಗೆ ತಿಳಿಸಿದರು.

ನಮ್ಮ ದೇಶದಲ್ಲಿ ಜಾತ್ರೆಗೆ ವಿಶೇಷ ಮಹತ್ವವಿದೆ. ಜಾತ್ರೆ ನಮ್ಮ ಹಳೆಯ ಸಂಪ್ರದಾಯ, ಧಾರ್ಮಿಕ, ಸಾಂಸ್ಕೃತಿಕ, ಭೌಗೋಳಿಕ ಮಾಹಿತಿಯ ಜೊತೆಗೆ, ನಾವು ಪರಸ್ಪರ ಅರ್ಥಮಾಡಿಕೊಳ್ಳುವ ಮತ್ತು ಉತ್ತಮ ಬಾಂಧವ್ಯದ ಪ್ರಯೋಜನವನ್ನು ಪಡೆಯುತ್ತೇವೆ ಎಂದರು. 

ಕೃಷಿ ಮೇಳದಲ್ಲಿ ಸುಸಜ್ಜಿತ ಮಳಿಗೆಗಳನ್ನು ನಿರ್ಮಿಸಿ, ಆಧುನಿಕ ತಂತ್ರಜ್ಞಾನ ಸೇರಿದಂತೆ ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆ ಮತ್ತು ಲಾಭದಾಯಕ ಸಮಗ್ರ ಕೃಷಿ ಪದ್ಧತಿ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಈ ಮೇಳಗಳು ಆದಿ ಕಾಲದಿಂದಲೂ ನಡೆಯುತ್ತಾ ಬಂದಿದೆ. ಬಾಲ್ಯದಲ್ಲಿ ಪೋಷಕರು ನಮ್ಮ ಕೈಹಿಡಿದು ಮೇಳಗಳಿಗೆ ಕರೆದುಕೊಂಡು ಹೋಗುತ್ತಿದ್ದರು, ಹಬ್ಬದ ಮಾದರಿಯಲ್ಲಿ ನಾವು ಸಂಭ್ರಮಿಸುತ್ತಿದ್ದೆವು ಎಂದು ಅವರು ಬಾಲ್ಯದ ದಿನಗಳನ್ನು ನೆನೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT