ಯುವ ನೀತಿ ರಚನಾ ಸಮಿತಿ ಅಧ್ಯಕ್ಷರ ಜೊತೆಗೆ ನಾರಾಯಣಗೌಡ ಮಾತುಕತೆ 
ರಾಜ್ಯ

2021ರ ಯುವನೀತಿ ರಚನಾ ಸಮಿತಿ ಅಧ್ಯಕ್ಷರ ಜೊತೆ ಸಚಿವ ಡಾ. ನಾರಾಯಣಗೌಡ ಅನೌಪಚಾರಿಕ ಚರ್ಚೆ

2021ರ ಕರ್ನಾಟಕ ಯುವ ನೀತಿ ರೂಪಿಸಲು ರಚಿಸಿರುವ ನೂತನ ಸಮಿತಿಯ ಅಧ್ಯಕ್ಷರ ಜೊತೆಗೆ ರೇಷ್ಮೆ , ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಭಾನುವಾರ ಅನೌಪಚಾರಿಕ ಚರ್ಚೆ ನಡೆಸಿದರು. ಯುವ ನೀತಿ 2021 ರೂಪಿಸಲು ರಚಿಸಲಾಗಿರುವ ನೂತನ ಸಮಿತಿ ನಾಳೆ ಸಭೆ ಸೇರಲಿದೆ.

ಬೆಂಗಳೂರು: 2021ರ ಕರ್ನಾಟಕ ಯುವ ನೀತಿ ರೂಪಿಸಲು ರಚಿಸಿರುವ ನೂತನ ಸಮಿತಿಯ ಅಧ್ಯಕ್ಷರ ಜೊತೆಗೆ ರೇಷ್ಮೆ , ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಭಾನುವಾರ ಅನೌಪಚಾರಿಕ ಚರ್ಚೆ ನಡೆಸಿದರು. ಯುವ ನೀತಿ 2021 ರೂಪಿಸಲು ರಚಿಸಲಾಗಿರುವ ನೂತನ ಸಮಿತಿ ನಾಳೆ ಸಭೆ ಸೇರಲಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಯುವನೀತಿ 2021 ಸಮಿತಿ ಅಧ್ಯಕ್ಷ ಸ್ವಾಮಿ ವಿವೇಕಾನಂದ ಯುವ ಚಳವಳಿಯ ಸಂಸ್ಥಾಪಕ ಡಾ. ಬಾಲ ಸುಬ್ರಹ್ಮಣ್ಯಂ ಇಂದು ಸಚಿವ ಡಾ.ನಾರಾಯಣಗೌಡ ಅವರನ್ನು ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.

ಕೇಂದ್ರ ಸರ್ಕಾರ ಯುವಕರಿಗೆ ತಂದಿರುವ ಕಾರ್ಯಕ್ರಮಗಳು, ರಾಜ್ಯ ಸರ್ಕಾರ ಕೈಗೊಂಡಿರುವ ಯೋಜನೆಗಳು ಸೇರಿದಂತೆ ಯುವ ನೀತಿ ರಚನೆಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಸಚಿವರು ಮಾಹಿತಿ ವಿನಿಮಯ ಮಾಡಿಕೊಂಡರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 
ರಾಜ್ಯ ಯುವನೀತಿ 2021 ರೂಪಿಸುವ ಸಂಬಂಧ ಸರ್ಕಾರ ಸ್ವಾಮಿ ವಿವೇಕಾನಂದ ಯುವ ಚಳವಳಿಯ ಸಂಸ್ಥಾಪಕ ಡಾ. ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದಲ್ಲಿ 13 ಜನರ ಸಮಿತಿ ರಚಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT