ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದ 29 ಜಿಲ್ಲೆಗಳಲ್ಲಿ ಸತತ 2ನೇ ದಿನವೂ ಶೂನ್ಯ ಸಾವು ದಾಖಲು!

ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ಬೆಂಗಳೂರು: ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮೂರು ಹಾಗೂ ಭಾನುವಾರ ಎರಡು ಸಾವುಗಳು ವರದಿಯಾಗಿದ್ದರೆ, 29 ಜಿಲ್ಲೆಗಳಲ್ಲಿ ಎರಡೂ ದಿನ ಕೂಡ ಶೂನ್ಯ ಸಾವುಗಳು ವರದಿಯಾಗಿವೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 1 ರಿಂದಲೂ ದಿನನಿತ್ಯದ ಸಾವುಗಳು ಸತತವಾಗಿ ಒಂದಂಕಿಯಲ್ಲಿ ಇರುವುದು ಕಂಡು ಬಂದಿದೆ. ಇದೇ ವೇಳೆ ಅಕ್ಟೋಬರ್ 4 ರಿಂದಲೂ ಮರಣ ಪ್ರಮಾಣವು ಸತತ ಶೇ.1.24ರಷ್ಟಿದ್ದು, ಈ ಪ್ರಮಾಣವನ್ನು ಶೇ.1ಕ್ಕೆ ಇಳಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ.

ಹಬ್ಬಗಳ ಸೀಸನ್ ನಡುವೆಯೂ ರಾಜ್ಯದ 29 ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿರುವುದು ಕೊರೋನಾ ಅಬ್ಬರ ಇಳಿಕೆಯಾಗಿರುವುದನ್ನು ಸೂಚಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ನವೆಂಬರ್ 6 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶೇ.98.19ರಷ್ಟಿದ್ದ ಚೇತರಿಕೆ ದರ ನಿನ್ನೆ ಶೇ.98.17ಕ್ಕೆ ಕುಸಿದಿರುವುದು ಕಂಡು ಬಂದಿದೆ.

ರಾಜ್ಯಾದ್ಯಂತ, ನವೆಂಬರ್ 5 ರಿಂದ ಚೇತರಿಕೆಯ ದರವು ಶೇ.98.45 ಪ್ರತಿಶತದಲ್ಲಿಯೇ ಉಳಿದಿದ್ದು, 7,997 ಸಕ್ರಿಯ ಪ್ರಕರಣಗಳಿರುವುದು ಕಂಡು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT