ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದ 29 ಜಿಲ್ಲೆಗಳಲ್ಲಿ ಸತತ 2ನೇ ದಿನವೂ ಶೂನ್ಯ ಸಾವು ದಾಖಲು!

ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ಬೆಂಗಳೂರು: ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮೂರು ಹಾಗೂ ಭಾನುವಾರ ಎರಡು ಸಾವುಗಳು ವರದಿಯಾಗಿದ್ದರೆ, 29 ಜಿಲ್ಲೆಗಳಲ್ಲಿ ಎರಡೂ ದಿನ ಕೂಡ ಶೂನ್ಯ ಸಾವುಗಳು ವರದಿಯಾಗಿವೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 1 ರಿಂದಲೂ ದಿನನಿತ್ಯದ ಸಾವುಗಳು ಸತತವಾಗಿ ಒಂದಂಕಿಯಲ್ಲಿ ಇರುವುದು ಕಂಡು ಬಂದಿದೆ. ಇದೇ ವೇಳೆ ಅಕ್ಟೋಬರ್ 4 ರಿಂದಲೂ ಮರಣ ಪ್ರಮಾಣವು ಸತತ ಶೇ.1.24ರಷ್ಟಿದ್ದು, ಈ ಪ್ರಮಾಣವನ್ನು ಶೇ.1ಕ್ಕೆ ಇಳಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ.

ಹಬ್ಬಗಳ ಸೀಸನ್ ನಡುವೆಯೂ ರಾಜ್ಯದ 29 ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿರುವುದು ಕೊರೋನಾ ಅಬ್ಬರ ಇಳಿಕೆಯಾಗಿರುವುದನ್ನು ಸೂಚಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ನವೆಂಬರ್ 6 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶೇ.98.19ರಷ್ಟಿದ್ದ ಚೇತರಿಕೆ ದರ ನಿನ್ನೆ ಶೇ.98.17ಕ್ಕೆ ಕುಸಿದಿರುವುದು ಕಂಡು ಬಂದಿದೆ.

ರಾಜ್ಯಾದ್ಯಂತ, ನವೆಂಬರ್ 5 ರಿಂದ ಚೇತರಿಕೆಯ ದರವು ಶೇ.98.45 ಪ್ರತಿಶತದಲ್ಲಿಯೇ ಉಳಿದಿದ್ದು, 7,997 ಸಕ್ರಿಯ ಪ್ರಕರಣಗಳಿರುವುದು ಕಂಡು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT