ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದ 29 ಜಿಲ್ಲೆಗಳಲ್ಲಿ ಸತತ 2ನೇ ದಿನವೂ ಶೂನ್ಯ ಸಾವು ದಾಖಲು!

ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ಬೆಂಗಳೂರು: ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮೂರು ಹಾಗೂ ಭಾನುವಾರ ಎರಡು ಸಾವುಗಳು ವರದಿಯಾಗಿದ್ದರೆ, 29 ಜಿಲ್ಲೆಗಳಲ್ಲಿ ಎರಡೂ ದಿನ ಕೂಡ ಶೂನ್ಯ ಸಾವುಗಳು ವರದಿಯಾಗಿವೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 1 ರಿಂದಲೂ ದಿನನಿತ್ಯದ ಸಾವುಗಳು ಸತತವಾಗಿ ಒಂದಂಕಿಯಲ್ಲಿ ಇರುವುದು ಕಂಡು ಬಂದಿದೆ. ಇದೇ ವೇಳೆ ಅಕ್ಟೋಬರ್ 4 ರಿಂದಲೂ ಮರಣ ಪ್ರಮಾಣವು ಸತತ ಶೇ.1.24ರಷ್ಟಿದ್ದು, ಈ ಪ್ರಮಾಣವನ್ನು ಶೇ.1ಕ್ಕೆ ಇಳಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ.

ಹಬ್ಬಗಳ ಸೀಸನ್ ನಡುವೆಯೂ ರಾಜ್ಯದ 29 ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿರುವುದು ಕೊರೋನಾ ಅಬ್ಬರ ಇಳಿಕೆಯಾಗಿರುವುದನ್ನು ಸೂಚಿಸುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ನವೆಂಬರ್ 6 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶೇ.98.19ರಷ್ಟಿದ್ದ ಚೇತರಿಕೆ ದರ ನಿನ್ನೆ ಶೇ.98.17ಕ್ಕೆ ಕುಸಿದಿರುವುದು ಕಂಡು ಬಂದಿದೆ.

ರಾಜ್ಯಾದ್ಯಂತ, ನವೆಂಬರ್ 5 ರಿಂದ ಚೇತರಿಕೆಯ ದರವು ಶೇ.98.45 ಪ್ರತಿಶತದಲ್ಲಿಯೇ ಉಳಿದಿದ್ದು, 7,997 ಸಕ್ರಿಯ ಪ್ರಕರಣಗಳಿರುವುದು ಕಂಡು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ