ಶಾಸಕ ರಾಮಣ್ಣ ಲಮಾಣಿ 
ರಾಜ್ಯ

ಗದಗ: ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಭೇಟಿ ಮಾಡಿದ ಶಾಸಕ, ಮತ್ತೆ ಭರವಸೆ

ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಭೇಟಿ ಮಾಡಿದ್ದು ಶೀಘ್ರವೇ ಮನೆಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. 

ಗದಗ: ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ  ಭೇಟಿ ಮಾಡಿದ್ದು ಶೀಘ್ರವೇ ಮನೆಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. 

ಎರಡು ವರ್ಷಗಳ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಸ್ಥಳೀಯ ಸರ್ಕಾರ ಹಾಗೂ ಶಾಸಕರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಆರೋಪಿಸಿ ಲಕ್ಷ್ಮೇಶ್ವರ ಟೌನ್ ನ ಹುಬ್ಬಳ್ಳಿ ರಸ್ತೆಯಲ್ಲಿ 70-80 ಆಸುಪಾಸಿನ ವಯಸ್ಸಿನ ವೃದ್ಧ ಪ್ರತಿಭಟನೆ ನಡೆಸುತ್ತಿದ್ದರು. 

ಇದಕ್ಕೂ ಮುನ್ನ ಭಾನುವಾರ ಸಂಜೆ ಪ್ರತಿಭಟನೆ ನಡೆಸುತ್ತಿದ್ದ ವ್ಯಕ್ತಿಯನ್ನು ಭೇಟಿ ಮಾಡಿದ್ದ ಸ್ಥಳೀಯ ಅಧಿಕಾರಿಗಳು ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡಿದ್ದರು. ಈ ಬಳಿಕ ಶಾಸಕರು ತಹಶಿಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ ಹಾಗೂ ಇತರ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಶೀಘ್ರವೇ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು ಎಂಬ ಭರವಸೆ ನೀಡಿದ್ದಾರೆ.

ಫಕೀರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಈಗಲೂ ಸರ್ಕಾರವನ್ನು ನಂಬುತ್ತೇನೆ, ಶಾಸಕರು ನನಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ನನ್ನನ್ನು ಭೇಟಿ ಮಾಡಲು ಬಂದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT