ಸೌದೆ ಒಲೆಯಲ್ಲಿ ಕಾಫಿ ಬೀಜಗಳ ಒಣಗಿಸುತ್ತಿರುವ ಬೆಳೆಗಾರರು. 
ರಾಜ್ಯ

ಅಕಾಲಿಕ ಮಳೆಯಿಂದ ಎದುರಾದ ಸಂಕಷ್ಟ: ಸೌದೆ ಒಲೆ ಮೂಲಕ ಕಾಫಿ ಬೀಜ ಒಣಗಿಸಲು ಬೆಳೆಗಾರರು ಮುಂದು!

ಅಕಾಲಿಕ ಮಳೆ ಕೊಡಗು ಜಿಲ್ಲೆಯಲ್ಲಿ ಅವಾಂತರಗಳನ್ನೇ ಸೃಷ್ಟಿಸಿದ್ದು, ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಮಡಿಕೇರಿ: ಅಕಾಲಿಕ ಮಳೆ ಕೊಡಗು ಜಿಲ್ಲೆಯಲ್ಲಿ ಅವಾಂತರಗಳನ್ನೇ ಸೃಷ್ಟಿಸಿದ್ದು, ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಸುದೀರ್ಘವಾಗಿ ಮಳೆ ಸುರಿದಿದ್ದು, ಸಾಕಷ್ಟು ಕಾಫಿ ಬೀಜಗಳು ಹಾನಿಗೀಡಾಗಿವೆ. ಉಳಿದಿರುವ ಬೀಜವನ್ನು ಕುಯ್ಲು ಮಾಡಲು ಹರಸಾಹಸ ಪಡುತ್ತಿದ್ದಾರೆ.

ಕಾಫಿ ಬೆಳೆಗಾರರು ಕಾರ್ಮಿಕರ ಸಹಾಯದಿಂದ ಕಾಫಿ ಹಣ್ಣು ಕೊಯ್ಲು ಮಾಡಿ ಹಣ್ಣನು ಪಲ್ಪರ್‌ಬೀಜವಾಗಿ ಪರಿವರ್ತಿಸುವುದು ಮಾಡುತ್ತಾರೆ. ಪಲ್ಪರ್‌ ಮಾಡಿದ ಕಾಫಿ ಬೀಜವನ್ನು ಪಾರ್ಚಿಮೆಂಟ್‌ ಬಿಸಿಲಿಗೆ ಒಣಗಿಸುತ್ತಾರೆ ಹಾಗೂ ಪಲ್ಪರ್‌ ಮಾಡಲು ಸಾಧ್ಯವಾಗದವರು ಕೊಯ್ಲು ಮಾಡಿದ ಕಾಫಿಹಣ್ಣನ್ನು ಬಿಸಿಲಿಗೆ ಒಣಗಿಸುತ್ತಾರೆ. ಆದರೆ, ಮಳೆ ಹಿನ್ನೆಲೆಯಲ್ಲಿ ಕಾಫಿ ಬೀಜಗಳನ್ನು ಒಣಗಿಸಲು ಸಾಧ್ಯವಾಗುತ್ತಿಲ್ಲ.

ಅರೇಬಿಕಾ ವಿಧದ ಕಾಫಿ ಕೊಯ್ಲು ಅವಧಿಯು ನವೆಂಬರ್‌ನಲ್ಲಿ ಪ್ರಾರಂಭವಾಗುತ್ತದೆ ಮತ್ತು ಮಾಗಿದ ಕಾಳುಗಳನ್ನು ಸೂರ್ಯನ ಕೆಳಗೆ ಒಣಗಿಸಬೇಕು. ಆದಾಗ್ಯೂ, ಕೊಡಗಿನ ಕೆಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಬೆಳೆಗಾರರು ಮಳೆಯಲ್ಲೇ ಕಾಫಿ ಬೀಜಗಳ ಕೀಳುವ ಕಷ್ಟಕರ ಕೆಲಸವನ್ನು ಎದುರಿಸುತ್ತಿದ್ದಾರೆ. ಇದಲ್ಲದೆ, ಸಂಗ್ರಹಿಸಿದ ಬೀಜಗಳನ್ನು ಮಳೆಯಲ್ಲಿ ಒಣಗಿಸಲು ಸಾಧ್ಯವಾಗದೆ ಮರದ ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಿ ಒಣಗಿಸಲು ಮುಂದಾಗಿದ್ದಾರೆ.

ಮಕ್ಕಂದೂರು ಗ್ರಾಮದ ಕಾಫಿ ಬೆಳೆಗಾರ ಕೆ.ವಿಕಾಸ್ ಅವರು ಮಾತನಾಡಿ, ಮಾಗಿದ ಕಾಫಿಯನ್ನು ಒಣಗಿಸಲು ಒಲೆಗಳನ್ನು ಬಳಸಲಾಗುತ್ತಿದೆ. ಸಾಮಾನ್ಯವಾಗಿ ಬಿಸಿಲಿನಲ್ಲಿ ಒಣಗಿಸುವ ಕಾಫಿ ಬೀಜಗಳನ್ನು ಮಳೆ ಹಿನ್ನೆಲೆಯಲ್ಲಿ ಸೌದೆ ಒಲೆಯ ಮೇಲೆ ಒಣಗಿಸಲಾಗುತ್ತಿದೆ. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಕಾಫಿ ಬೀಜಗಳನ್ನು ಒಣಗಿಸುವ ಈ ಸಾಂಪ್ರದಾಯಿಕವಲ್ಲದ ವಿಧಾನವನ್ನು ಅನುಸರಿಸುವುದು ಇದೀಗ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ

ಒಣಗಿಸದ ಕಾಫಿ ಬೀಜಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆಗಳಿರುವುದಿಲ್ಲ. ನೆನೆದ ಬೀಜಗಳನ್ನು ವ್ಯಾಪಾರಿಗಳು ಖರೀದಿಸುವುದಿಲ್ಲ ಎಂದು ಜಿಲ್ಲೆಯ ಕಾಫಿ ವ್ಯಾಪಾರಿ ಬಿ.ಎನ್.ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ