ಸೌದೆ ಒಲೆಯಲ್ಲಿ ಕಾಫಿ ಬೀಜಗಳ ಒಣಗಿಸುತ್ತಿರುವ ಬೆಳೆಗಾರರು. 
ರಾಜ್ಯ

ಅಕಾಲಿಕ ಮಳೆಯಿಂದ ಎದುರಾದ ಸಂಕಷ್ಟ: ಸೌದೆ ಒಲೆ ಮೂಲಕ ಕಾಫಿ ಬೀಜ ಒಣಗಿಸಲು ಬೆಳೆಗಾರರು ಮುಂದು!

ಅಕಾಲಿಕ ಮಳೆ ಕೊಡಗು ಜಿಲ್ಲೆಯಲ್ಲಿ ಅವಾಂತರಗಳನ್ನೇ ಸೃಷ್ಟಿಸಿದ್ದು, ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಮಡಿಕೇರಿ: ಅಕಾಲಿಕ ಮಳೆ ಕೊಡಗು ಜಿಲ್ಲೆಯಲ್ಲಿ ಅವಾಂತರಗಳನ್ನೇ ಸೃಷ್ಟಿಸಿದ್ದು, ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಸುದೀರ್ಘವಾಗಿ ಮಳೆ ಸುರಿದಿದ್ದು, ಸಾಕಷ್ಟು ಕಾಫಿ ಬೀಜಗಳು ಹಾನಿಗೀಡಾಗಿವೆ. ಉಳಿದಿರುವ ಬೀಜವನ್ನು ಕುಯ್ಲು ಮಾಡಲು ಹರಸಾಹಸ ಪಡುತ್ತಿದ್ದಾರೆ.

ಕಾಫಿ ಬೆಳೆಗಾರರು ಕಾರ್ಮಿಕರ ಸಹಾಯದಿಂದ ಕಾಫಿ ಹಣ್ಣು ಕೊಯ್ಲು ಮಾಡಿ ಹಣ್ಣನು ಪಲ್ಪರ್‌ಬೀಜವಾಗಿ ಪರಿವರ್ತಿಸುವುದು ಮಾಡುತ್ತಾರೆ. ಪಲ್ಪರ್‌ ಮಾಡಿದ ಕಾಫಿ ಬೀಜವನ್ನು ಪಾರ್ಚಿಮೆಂಟ್‌ ಬಿಸಿಲಿಗೆ ಒಣಗಿಸುತ್ತಾರೆ ಹಾಗೂ ಪಲ್ಪರ್‌ ಮಾಡಲು ಸಾಧ್ಯವಾಗದವರು ಕೊಯ್ಲು ಮಾಡಿದ ಕಾಫಿಹಣ್ಣನ್ನು ಬಿಸಿಲಿಗೆ ಒಣಗಿಸುತ್ತಾರೆ. ಆದರೆ, ಮಳೆ ಹಿನ್ನೆಲೆಯಲ್ಲಿ ಕಾಫಿ ಬೀಜಗಳನ್ನು ಒಣಗಿಸಲು ಸಾಧ್ಯವಾಗುತ್ತಿಲ್ಲ.

ಅರೇಬಿಕಾ ವಿಧದ ಕಾಫಿ ಕೊಯ್ಲು ಅವಧಿಯು ನವೆಂಬರ್‌ನಲ್ಲಿ ಪ್ರಾರಂಭವಾಗುತ್ತದೆ ಮತ್ತು ಮಾಗಿದ ಕಾಳುಗಳನ್ನು ಸೂರ್ಯನ ಕೆಳಗೆ ಒಣಗಿಸಬೇಕು. ಆದಾಗ್ಯೂ, ಕೊಡಗಿನ ಕೆಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಬೆಳೆಗಾರರು ಮಳೆಯಲ್ಲೇ ಕಾಫಿ ಬೀಜಗಳ ಕೀಳುವ ಕಷ್ಟಕರ ಕೆಲಸವನ್ನು ಎದುರಿಸುತ್ತಿದ್ದಾರೆ. ಇದಲ್ಲದೆ, ಸಂಗ್ರಹಿಸಿದ ಬೀಜಗಳನ್ನು ಮಳೆಯಲ್ಲಿ ಒಣಗಿಸಲು ಸಾಧ್ಯವಾಗದೆ ಮರದ ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಿ ಒಣಗಿಸಲು ಮುಂದಾಗಿದ್ದಾರೆ.

ಮಕ್ಕಂದೂರು ಗ್ರಾಮದ ಕಾಫಿ ಬೆಳೆಗಾರ ಕೆ.ವಿಕಾಸ್ ಅವರು ಮಾತನಾಡಿ, ಮಾಗಿದ ಕಾಫಿಯನ್ನು ಒಣಗಿಸಲು ಒಲೆಗಳನ್ನು ಬಳಸಲಾಗುತ್ತಿದೆ. ಸಾಮಾನ್ಯವಾಗಿ ಬಿಸಿಲಿನಲ್ಲಿ ಒಣಗಿಸುವ ಕಾಫಿ ಬೀಜಗಳನ್ನು ಮಳೆ ಹಿನ್ನೆಲೆಯಲ್ಲಿ ಸೌದೆ ಒಲೆಯ ಮೇಲೆ ಒಣಗಿಸಲಾಗುತ್ತಿದೆ. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಕಾಫಿ ಬೀಜಗಳನ್ನು ಒಣಗಿಸುವ ಈ ಸಾಂಪ್ರದಾಯಿಕವಲ್ಲದ ವಿಧಾನವನ್ನು ಅನುಸರಿಸುವುದು ಇದೀಗ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ

ಒಣಗಿಸದ ಕಾಫಿ ಬೀಜಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆಗಳಿರುವುದಿಲ್ಲ. ನೆನೆದ ಬೀಜಗಳನ್ನು ವ್ಯಾಪಾರಿಗಳು ಖರೀದಿಸುವುದಿಲ್ಲ ಎಂದು ಜಿಲ್ಲೆಯ ಕಾಫಿ ವ್ಯಾಪಾರಿ ಬಿ.ಎನ್.ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT