ಮಾರುತಿ ಭೋಯಿ 
ರಾಜ್ಯ

ಪಿಎಫ್ ಸಂಘಟನೆಯ ಬೆಂಗಳೂರು ವಲಯ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತರಾಗಿ ಮಾರುತಿ ಭೋಯಿ ಅಧಿಕಾರ

ಭವಿಷ್ಯ ನಿಧಿ ಸಂಘಟನೆಯ ಬೆಂಗಳೂರು ವಲಯದ ಅಪರ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತರಾಗಿ ಶ್ರೀಯುತ ಮಾರುತಿ ಭೋಯಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಂಗಳೂರು: ಅಪರ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತರು (ಕರ್ನಾಟಕ ಮತ್ತು ಗೋವಾ), ಹುಬ್ಬಳ್ಳಿ ವಲಯದ ಶ್ರೀಯುತ ಮಾರುತಿ ಭೋಯಿ ರವರು ಭವಿಷ್ಯ ನಿಧಿ ಸಂಘಟನೆಯ ಬೆಂಗಳೂರು ವಲಯದ ಅಪರ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 

ಶ್ರೀಯುತ ಮಾರುತಿ ಭೋಯಿ ರವರು ಭವಿಷ್ಯ ನಿಧಿಗೆ ಸೇರುವ ಮೊದಲು ಭಾರತೀಯ ವಾಯುಸೇನೆ ಮತ್ತು ಕೇಂದ್ರೀಯ ಅಬಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. 1997ರಲ್ಲಿ ಭವಿಷ್ಯ ನಿಧಿ ಸಂಘಟನೆಗೆ ಸಹಾಯಕ ಭವಿಷ್ಯ ನಿಧಿ ಆಯುಕ್ತರಾಗಿ ಸೇರಿದ ಅವರು ಕೊಚ್ಚಿನ್, ನಿಜಾಮಾಬಾದ್, ಸೇಲಂ, ಗೌಹಾಟಿ, ಉಡುಪಿ, ವೇಲೂರು, ಗುಲ್ಬರ್ಗ, ಮಂಗಳೂರು ಮುಂತಾದ ಕಛೇರಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರು ಕರ್ನಾಟಕದ ಹಾವೇರಿ ಜಿಲ್ಲೆಯ ಸಾವನೂರಿನಲ್ಲಿ ತಮ್ಮ ಹೈ ಸ್ಕೂಲ್ ಶಿಕ್ಷಣವನ್ನು ಪೂರೈಸಿದ್ದರು.

ಶ್ರೀಯುತ ಮಾರುತಿ ಭೋಯಿ ರವರು 27/10/2003ರಲ್ಲಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು-II ಮತ್ತು 08/02/2013ರಲ್ಲಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು-I ಆಗಿ ಬಡ್ತಿ ಹೊಂದಿದ್ದರು. ಅಪರ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತರಾಗಿ 24/07/2019ರಲ್ಲಿ ಬಡ್ತಿ ಹೊಂದಿ ಭವಿಷ್ಯ ನಿಧಿಯ ಕೇಂದ್ರ ಕಛೇರಿಯಲ್ಲಿ ಕಾರ್ಯನಿರ್ವಹಿಸಿ ದಿನಾಂಕ 12/07/2021ರಲ್ಲಿ ಹುಬ್ಬಳ್ಳಿ ವಲಯಕ್ಕೆ ವರ್ಗಾವಣೆಯಾಗಿ ಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT