ಸಂಗ್ರಹ ಚಿತ್ರ 
ರಾಜ್ಯ

ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದ 6 ಮಂದಿ ಬಂಧನ

ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಮಂಗಳೂರು: ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿ ಬಂಧನಕ್ಕೊಳಪಡಿಸಲಾಗಿದೆ.

ಬಂಧತರನ್ನು ಪ್ರಹ್ಲಾದ್ ಆಚಾರ್ಯ, ಪ್ರಶಾಂತ್ ಆಚಾರ್ಯ, ಗುರು ಪ್ರಸಾದ್, ಪ್ರತೀಶ್ ಆಚಾರ್ಯ, ಭರತ್ ಶೆಟ್ಟಿ ಮತ್ತು ಸುಖೇಶ್ ಎಂದು ಗುರ್ತಿಸಲಾಗಿದೆ.

ಸೋಮವಾರ ರಾತ್ರಿ 10.30ರ ಸುಮಾರಿಗೆ ಸುರತ್ಕಲ್ ನಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ವ್ಯಕ್ತಿ ಮೊಹಮ್ಮದ್ ಯಾಸೀನ್ ಮುಕ್ಕಾದ ಖಾಸಗಿ ಕಾಲೇಜಿನಲ್ಲಿ ಬಿಎಸ್'ಸಿ ವ್ಯಾಸಾಂಗ ಮಾಡುತ್ತಿದ್ದು, ಸಹಪಾಠಿಯಾಗಿದ್ದ ಆ್ಯನ್ಸಿ ವಿನ್ನಿ ದಯಾಸ್ ಅವರನ್ನು ಅಪಾರ್ಟ್ ವೊಂದಕ್ಕೆ ಡ್ರಾಪ್ ಮಾಡಲು ಹೋಗಿದ್ದರು. ಈ ವೇಳೆ ಇಬ್ಬರನ್ನು ಹಿಂಬಾಲಿಸಿದ್ದ ಆರೋಪಿಗಳು, ಇಬ್ಬರ ಮೇಲೆ ದಾಳಿ ನಡೆಸಿ ಕೆಟ್ಟ ಪದಗಳಿಂದ ನಿಂದಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು.

ಈ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರದಲ್ಲಿ ಎರಡು ‘ನೈತಿಕ ಪೊಲೀಸ್’ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಅಲ್ಪಸಂಖ್ಯಾತ ಸಮುದಾಯದ ಯುವಕರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ವರದಿಯಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದರೂ ಪೊಲೀಸರು ತನಿಖೆ ನಡೆಸುತ್ತಿದ್ದು, ಈವರೆಗೂ ಯಾರನ್ನೂ ಬಂಧಿಸಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT