ವೆಂಕಯ್ಯ ನಾಯ್ಡು 
ರಾಜ್ಯ

ಬೆಂಗಳೂರು ತಂತ್ರಜ್ಞಾನ ಶೃಂಗ ಸಮಾವೇಶಕ್ಕೆ ಇಂದು ವೆಂಕಯ್ಯ ನಾಯ್ಡು ಚಾಲನೆ: ನವೆಂಬರ್ 18ಕ್ಕೆ ಮೋದಿ ಭಾಷಣ

ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಚಾಲನೆ ನೀಡಲಿದ್ದಾರೆ.

ಬೆಂಗಳೂರು: ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗದ 24ನೇ ವರ್ಷದ ಸಮಾವೇಶ ಇಂದಿನಿಂದ  ಆರಂಭವಾಗಲಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಚಾಲನೆ ನೀಡಲಿದ್ದಾರೆ.

‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷ ವಾಕ್ಯದಡಿ ನಡೆಯಲಿರುವ ಬಿಟಿಎಸ್‌-2021ರಲ್ಲಿ 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ , ಐರೋಪ್ಯ ಒಕ್ಕೂಟ, ವಿಯೆಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್‌ ಮತ್ತು ಆಸ್ಪ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಸೇರಿದಂತೆ ಹಲವು ಗಣ್ಯರು ವರ್ಚುವಲ್  ರೂಪದಲ್ಲಿ ಭಾಗವಹಿಸಲಿದ್ದಾರೆ.

ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ ಎಂದು ಐಟಿ-ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಮೊದಲ ಬಾರಿಗೆ ಭಾರತೀಯ ನಾವೀನ್ಯತಾ ಮೈತ್ರಿಕೂಟ (ಜಿಐಎ) ಎಂಬ ಪರಿಕಲ್ಪನೆ ಅಳವಡಿಸಿಕೊಳ್ಳಲಾಗಿದ್ದು, ಇದರ ಭಾಗವಾಗಿ ಜರ್ಮನಿ, ಜಪಾನ್‌, ಫಿನ್ಲೆಂಡ್‌, ಲಿಥುವೇನಿಯಾ, ಸ್ವೀಡನ್‌, ಸ್ವಿಜರ್ಲೆಂಡ್‌ ಮುಂತಾದ ದೇಶಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತದೆ. ಬಿಟಿಎಸ್‌-2021ರ ಅಂಗವಾಗಿ ನಾಲ್ಕು ವೇದಿಕೆಗಳಲ್ಲಿ ಒಟ್ಟು 75 ಗೋಷ್ಠಿಗಳನ್ನು ಮತ್ತು 7 ಸಂವಾದಗಳನ್ನು ಏರ್ಪಡಿಸಲಾಗಿದೆ.

ಇವುಗಳಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಮೂಲಕ ನಾವೀನ್ಯತೆಯ ಬೆಳವಣಿಗೆ, ಫಿನ್‌ಟೆಕ್‌ ಭವಿಷ್ಯದ ಹೆಜ್ಜೆಗಳು, ಕೃಷಿ, ಜೀವವಿಜ್ಞಾನ ಸಂಶೋಧನೆ, ಮಹಿಳಾ ಉದ್ಯಮಶೀಲತೆಯ ಸವಾಲುಗಳು, ಶೈಕ್ಷಣಿಕ ತಂತ್ರಜ್ಞಾನ, ಮುಂದಿನ ತಲೆಮಾರಿನ ವೈದ್ಯಕೀಯ ತಂತ್ರಜ್ಞಾನ, ವಂಶವಾಹಿ ಆಧಾರಿತ ಔಷಧಿಗಳು, ಜೀನ್‌ ಎಡಿಟಿಂಗ್‌, ಸೆಮಿಕಂಡಕ್ಟರ್‌, ಕ್ಯಾನ್ಸರ್‌ ಚಿಕಿತ್ಸೆ, , ಸೈಬರ್‌ ಸೆಕ್ಯುರಿಟಿ,  ಮುಂತಾದ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಇನ್ನೂ ಜನ ಸಾಮಾನ್ಯರು ಕೂಡ ಈ ಸಮಾವೇಶದಲ್ಲಿ ವರ್ಚ್ಯೂವಲ್ ಆಗಿ ಭಾಗವಹಿಸಬಹುದಾಗಿದೆ,  ಭಾಗವಹಿಸಲು ಆಸಕ್ತಿ ಉಳ್ಳವರು https://www.bengalurutechsummit.com/web/it_forms/registration-conference.php ಈ ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT