ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ನಿರಂತರ ಮಳೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದು ಇನ್ನೂ ಎರಡರಿಂದ ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದು ಇನ್ನೂ ಎರಡರಿಂದ ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಗುರುವಾರ ಹೇಳಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಆಗಿರುವ ವಾಯುಭಾರ ಕುಸಿತವೇ ನಿರಂತರ ಮಳೆಗೆ ಕಾರಣವಾಗಿದೆ. ಇದು ಚೆನ್ನೈ ಸಮೀಪ ಕೇಂದ್ರೀಕೃತಗೊಂಡಿದೆ. ಇದರಿಂದಾಗಿಯೇ ಚೆನ್ನೈ ಸೇರಿದಂತೆ ಅಲ್ಲಿನ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅತಿಯಾದ ಮಳೆಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಪ್ರತಿವರ್ಷ ನವೆಂಬರ್ – ಡಿಸೆಂಬರ್ ತಿಂಗಳುಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಮಾನ್ಯ. ಸಮುದ್ರದ ಮೇಲ್ಮೆಯಲ್ಲಿ ಇದರ ಪರಿಣಾಮ ಹೆಚ್ಚಾಗಿರುತ್ತದೆ. ಭೂಮಿ ಸಮೀಪಿಸಿದಂತೆ ಇದರ ಪರಿಣಾಮ ತಗ್ಗುತ್ತದೆ. ಆದರೆ ಸಮುದ್ರತೀರದ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿರುತ್ತದೆ. ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಇನ್ನೂ ಕೆಲವಾರು ಜಿಲ್ಲೆಗಳಲ್ಲಿಯೂ ಮಳೆಯ ಪರಿಣಾಮವಿರುತ್ತದೆ. ವಾಯುಭಾರ ಕುಸಿತ ಪರಿಣಾಮ ಪರಿಧಿ 500 ಕಿಲೋ ಮೀಟರ್ ತನಕ ಪಸರಿಸಿರುತ್ತದೆ ಎಂದಿದ್ದಾರೆ.

ನವೆಂಬರ್ – ಡಿಸೆಂಬರ್ ತಿಂಗಳಿನಲ್ಲಿ ಸಾಮಾನ್ಯವಾಗಿ ಬಂಗಾಳ ಕೊಲ್ಲಿಯಲ್ಲಿ ವಾರಕ್ಕೊಮ್ಮೆ, ಕೆಲವೊಮ್ಮೆ ಎರಡು ವಾರಕ್ಕೊಮ್ಮೆಯೂ ವಾಯುಭಾರ ಕುಸಿತ ಆಗುತ್ತದೆ. ಕೆಲವೊಮ್ಮೆ ಇದು ವೇಗವಾಗಿ ಚಲನೆಯಾಗುತ್ತದೆ. ಸದ್ಯಕ್ಕೆ ಇದು ನಿಧಾನವಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಾಳೆ ಮಧ್ಯಾಹ್ನದವರೆಗೂ ಮಳೆಯ ಬಿರುಸು ಹೆಚ್ಚಿರುತ್ತದೆ. ಇನ್ನೂ ಮೂರು ದಿನಗಳವರೆಗೆ ಮಳೆ ಇರುತ್ತದೆ ಎಂದು ಅವರು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT