ಶಾಲೆಗೆ ತೆರಳುತ್ತಿರುವ ಮಕ್ಕಳು (ಸಂಗ್ರಹ ಚಿತ್ರ) 
ರಾಜ್ಯ

ಕೊರೋನೋತ್ತರ ಸ್ಥಿತ್ಯಂತರ: ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಏರಿಕೆ; ಇದೇ ಮೊದಲ ಬಾರಿಗೆ ಖಾಸಗಿ ಶಾಲೆಗಳಲ್ಲಿ ಕುಸಿತ!

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯ ಪ್ರಮಾಣ ಒಂದು ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. 

ಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯ ಪ್ರಮಾಣ ಒಂದು ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. 2018 ರಲ್ಲಿ ಶೇ.69.4 ಹಾಗೂ 2020 ರಲ್ಲಿ ಶೇ.68.6 ರಷ್ಟಿದ್ದ ದಾಖಲಾತಿ ಪ್ರಮಾಣ ಈಗ ಶೇ.77.7 ಕ್ಕೆ ಏರಿಕೆಯಾಗಿದೆ. 

ಕೋವಿಡ್-19 ನಂತರದ ಶಿಕ್ಷಣದ ವಾರ್ಷಿಕ ಸ್ಥಿತಿ ವರದಿ (ASER) ಈ ಬಗ್ಗೆ ಸಮೀಕ್ಷೆ ನಡೆಸಿದ್ದು, ನ.17 ರಂದು ವರದಿ ಬಿಡುಗಡೆಯಾಗಿದೆ. 

30 ಜಿಲ್ಲೆಗಳ 890 ಗ್ರಾಮಗಳಲ್ಲಿ ಈ ಸಮೀಕ್ಷೆ ನಡೆದಿದ್ದು, 2021 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇ.77.7 ( ಶೇ.76.8 ರಷ್ಟು ವಿದ್ಯಾರ್ಥಿಗಳು ಹಾಗೂ ಶೇ.78.6 ರಷ್ಟು ವಿದ್ಯಾರ್ಥಿನಿಯರು) ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ಈ ನಡುವೆ ಖಾಸಗಿ ಬೋಧನೆ (private tuition) ಗಳನ್ನು ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆ ಕಂಡಿದೆ. 

ದೇಶಾದ್ಯಂತ 17,814 ಗ್ರಾಮಗಳಲ್ಲಿ 76,606 ಮನೆಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 4,841 ಮನೆಗಳು ಕರ್ನಾಟಕ ರಾಜ್ಯದ್ದಾಗಿವೆ. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಖಾಸಗಿ ಶಾಲೆಗಳಲ್ಲಿನ ದಾಖಲಾತಿ 2020 ರ ಶೇ.28.8 ರಿಂದ 2021 ರಲ್ಲಿ ಶೇ.24.4 ಕ್ಕೆ ಕುಸಿತ ಕಂಡಿದೆ.
 
ಸರ್ಕಾರಿ ಶಾಲೆಗಳಲ್ಲಿನ ದಾಖಲಾತಿ ಹೆಚ್ಚುವುದಕ್ಕೆ ಹಲವಾರು ಕಾರಣಗಳಿರಬಹುದು. ಕೋವಿಡ್-19 ಸಂದರ್ಭದಲ್ಲಿ ಕುಟುಂಬಗಳು ತೀವ್ರ ಆರ್ಥಿಕ ನಷ್ಟ ಎದುರಿಸಿವೆ. ಕೈಗೆಟುಕುವ ದರದಲ್ಲಿ ಶಿಕ್ಷಣ ನೀಡುತ್ತಿದ್ದ ಹಲವು ಶಾಲೆಗಳು ಈ ಅವಧಿಯಲ್ಲಿ ಮುಚ್ಚಿವೆ. ಖಾಸಗಿ ಶಾಲೆಗಳು ಮುಚ್ಚಿದ ಬಳಿಕ ಅಲ್ಲಿನ ಶಿಕ್ಷಕರೂ ತಮ್ಮ ವೃತ್ತಿಯನ್ನು ಬದಲಾಯಿಸಿದ್ದಾರೆ. ಸರ್ಕಾರವೂ ಸಹ ಇತ್ತೀಚಿನ ದಿನಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿದೆ. ನಗರ ಪ್ರದೇಶಗಳಲ್ಲಿ ಇದ್ದ ಹಲವು ವಲಸಿಗ ಕುಟುಂಬಗಳು ವಾಪಾಸ್ ತಮ್ಮ ಊರುಗಳಿಗೆ ತೆರಳಿವೆ ಇವೆಲ್ಲದರ ಕಾರಣದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿರಬಹುದು ಎಂದು ಟೀಚರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಬಿ.ಆರ್ ಗೋಪಾಲ್ ವಿಶ್ಲೇಷಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT