ಉದ್ಘಾಟನೆ ಬಳಿಕ ಬ್ಲಾಕ್ ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯದ ನೂತನ ಹೃದ್ರೋಗ ಘಟಕ ಉದ್ಘಾಟನೆ

ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್‌ ಫೌಂಡೇಶನ್‌ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್‌ ಬ್ಲಾಕ್‌) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ. 

ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್‌ ಫೌಂಡೇಶನ್‌ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್‌ ಬ್ಲಾಕ್‌) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ. 

350 ಬೆಡ್‌ಗಳ ಸೌಲಭ್ಯ ಹೊಂದಿರುವ ನೂತನ ಘಟಕ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌, ಇನ್ಫೋಸಿಸ್‌ ಗೌರವಾನ್ವಿತ ಅಧ್ಯಕ್ಷ ಎನ್‌.ಆರ್‌. ನಾರಾಯಣ ಮೂರ್ತಿ, ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ, ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕಿ ಸೌಮ್ಯ ರೆಡ್ಡಿ ಮತ್ತಿತರರು ಭಾಗವಹಿಸಿದ್ದರು. 

"ಹೊಸ ಕಟ್ಟಡವನ್ನು 103 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಒಂದೇ ಸೂರಿನಡಿ 15 ಕಾರ್ಡಿಯಾಕ್‌ ಕ್ಯಾಥ್‌ ಲ್ಯಾಬ್‌ಗಳನ್ನು ಹೊಂದಿರುವ ಏಕೈಕ ಸರಕಾರಿ ಸಂಸ್ಥೆ ಜಯದೇವ ಹೃದ್ರೋಗ ಸಂಸ್ಥೆಯಾಗಿದೆ. ಹೃದಯದ ಚಿಕಿತ್ಸೆಯ ತುರ್ತುಸ್ಥಿತಿಗಳು ಮತ್ತು ಹೃದಯ ಆರೈಕೆಗಾಗಿ ಪ್ರತಿದಿನ ಹೆಚ್ಚುತ್ತಿರುವ ಪ್ರಕರಣಗಳನ್ನು ನಿರ್ವಹಿಸಲು ನೂತನ ಕಟ್ಟಡ ನೆರವಾಗಲಿದೆ, ಆರ್ಥಿಕವಾಗಿ ದುರ್ಬಲರಾಗಿರುವ ಹೃದ್ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡುವುದು ಇದರ ಉದ್ದೇಶ" ಎಂದು ಜಯದೇವ ಹೃದ್ರೋಗ ಚಿಕಿತ್ಸಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಆರಂಭದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಕಟ್ಟಡ ನಿರ್ಮಿಸಲು ಉದ್ದೇಶಿಸಿದ್ದ ಇನ್ಫೋಸಿಸ್‌ ಪ್ರತಿಷ್ಠಾನವು ಬಳಿಕ 350 ಹಾಸಿಗೆಗಳ ಸಾಮರ್ಥ್ಯದ ಬ್ಲಾಕ್‌ ಕಟ್ಟಿಸಿಕೊಟ್ಟಿದೆ. ಹೊಸ ಘಟಕದಲ್ಲಿ 350 ಹಾಸಿಗೆಗಳ ಪೈಕಿ 100 ಐಸಿಯು ಬೆಡ್‌ಗಳು, 250 ಜನರಲ್‌ ಬೆಡ್‌ಗಳಿರುತ್ತವೆ. ಎರಡು ಶಸ್ತ್ರಚಿಕಿತ್ಸೆ ಘಟಕಗಳು, ಎರಡು ಕಾರ್ಡಿಯಾಕ್‌ ಕ್ಯಾಥ್‌ಲ್ಯಾಬ್‌ಗಳು, ಒಂದು ಹೈಬ್ರಿಡ್‌ ಆಪರೇಷನ್‌ ಥಿಯೇಟರ್‌ ಕೂಡ ಇದೆ. ನೂತನ ಕಟ್ಟಡ ನಿರ್ಮಾಣವಾದ ಹಿನ್ನೆಲೆ ಜಯದೇವ ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯ 1,050ಕ್ಕೆ ಏರಿಕೆಯಾಗಲಿದೆ. ಆ ಮೂಲಕ ಜಯದೇವ ಆಸ್ಪತ್ರೆಯು ದಕ್ಷಿಣ ಏಷ್ಯಾದ ಅತಿ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT