ರಾಜ್ಯ

ಚಿತ್ರದುರ್ಗ: ಮಳೆಯಿಂದ ಗೋಡೆ ಕುಸಿದು ಮೂವರು ದುರ್ಮರಣ

Nagaraja AB

ಚಿತ್ರದುರ್ಗ: ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ  ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತರನ್ನು ನಾಯಕನಹಟ್ಟಿಯ  ಕಂಪ್ಲೇಶಪ್ಪ(45), ಪತ್ನಿ ತಿಪ್ಪಮ್ಮ(38) ಮತ್ತು ಬ್ಯಾಡರಹಳ್ಳಿಯ ತ್ರಿವೇಣಿ (25) ಎಂದು ಗುರುತಿಸಲಾಗಿದೆ.

ನಾಯಕನಹಟ್ಟಿಯ ಅಂಬೇಡ್ಕರ್ ಕಾಲೋನಿಯಲ್ಲಿ ಗೋಡೆಯೊಂದು ಕುಸಿದು ಬಿದ್ದ ನಂತರ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಡೆದಾಗ ಅವರು ಗಾಢ ನಿದ್ರೆಯಲ್ಲಿದ್ದರು ಎನ್ನಲಾಗಿದೆ. ಅವರ ಪುತ್ರ ಅರುಣ್ ಕುಮಾರ್ ಬದುಕುಳಿದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತೊಂದು ಘಟನೆಯಲ್ಲಿ ಬ್ಯಾಡರಹಳ್ಳಿಯಲ್ಲಿ ಕೃಷ್ಣಮೂರ್ತಿ ಎಂಬವರಿಗೆ ಸೇರಿದ ಮನೆ ಕುಸಿದು ಅವರ ಪತ್ನಿ ತ್ರಿವೇಣಿ ಮೃತಪಟ್ಟಿದ್ದಾರೆ.

SCROLL FOR NEXT