ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ನಟ ಶಿವರಾಜ್ ಕುಮಾರ್ 
ರಾಜ್ಯ

'ಅಪ್ಪುಗೆ ಸೈಕಲ್ ರೈಡ್ ಅಂದರೆ ಇಷ್ಟವಾಗಿತ್ತು, ನನ್ನ ಹುಟ್ಟುಹಬ್ಬಕ್ಕೆ ಸೈಕಲ್ ಗಿಫ್ಟ್ ಮಾಡಿದ್ದ': ಜಾಥಾಕ್ಕೆ ಚಾಲನೆ ನೀಡಿ ಸ್ಮರಿಸಿಕೊಂಡ ನಟ ಶಿವರಾಜ್ ಕುಮಾರ್

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಪಾಲಿನ ಅಪ್ಪು ಅಗಲಿ ಇಂದು ಭಾನುವಾರಕ್ಕೆ 23 ದಿನ. ಪುನೀತ್ ರಾಜ್ ಕುಮಾರ್ ಅವರಿಗೆ ಸೈಕಲ್ ಪ್ರಯಾಣ ಎಂದರೆ ಅಚ್ಚುಮೆಚ್ಚು. ಬಿಡುವಿದ್ದಾಗ ಕಿಲೋಮೀಟರ್ ಗಟ್ಟಲೆ ಒಬ್ಬನೇ ಇಲ್ಲವೇ ಸ್ನೇಹಿತರ ಜೊತೆ ಸೈಕಲ್ ನಲ್ಲಿ ಸವಾರಿ ಹೋಗುತ್ತಿದ್ದರಂತೆ.

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಪಾಲಿನ ಅಪ್ಪು ಅಗಲಿ ಇಂದು ಭಾನುವಾರಕ್ಕೆ 23 ದಿನ. ಪುನೀತ್ ರಾಜ್ ಕುಮಾರ್ ಅವರಿಗೆ ಸೈಕಲ್ ಪ್ರಯಾಣ ಎಂದರೆ ಅಚ್ಚುಮೆಚ್ಚು. ಬಿಡುವಿದ್ದಾಗ ಕಿಲೋಮೀಟರ್ ಗಟ್ಟಲೆ ಒಬ್ಬನೇ ಇಲ್ಲವೇ ಸ್ನೇಹಿತರ ಜೊತೆ ಸೈಕಲ್ ನಲ್ಲಿ ಸವಾರಿ ಹೋಗುತ್ತಿದ್ದರಂತೆ.

ಇಂದು ರಾಜ್ಯ ಮೀಸಲು ಪೊಲೀಸ್ ಇಲಾಖೆ ಮತ್ತು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೈಕಲ್ ಜಾಥಾ ಹಮ್ಮಿಕೊಂಡಿದ್ದವು. ಅದಕ್ಕೆ ನಟ ಶಿವರಾಜ್ ಕುಮಾರ್ ಚಾಲನೆ ನೀಡಿದರು. ನಗರದ ಕಂಠೀರವ ಸ್ಟೇಡಿಯಂನಿಂದ 50 ಕಿಲೋ ಮೀಟರ್ ದೂರ ಸೈಕಲ್ ಜಾಥಾ ಸಾಗಿದೆ. ಜಾಥಾದಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹಾಗೂ ಇತರ ಪೊಲೀಸರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ನಟ ಶಿವರಾಜ್ ಕುಮಾರ್, ಅಪ್ಪುಗೆ ಸೈಕಲ್, ಸೈಕಲ್ ರೈಡ್ ಅಂದರೆ ಬಹಳ ಇಷ್ಟವಾಗಿತ್ತು. ಇಂದು ಅವನಿದ್ದಿದ್ರೆ ಈ 50 ಕಿಲೋ ಮೀಟರ್ ಸೈಕಲ್ ಜಾಥಾಗೆ ಬರ್ತಿದ್ದ. ನನ್ನ ಹುಟ್ಟುಹಬ್ಬಕ್ಕೆ ಸೈಕಲ್ ಗಿಫ್ಟ್ ಮಾಡಿದ್ದ. ಇಂದು ಅವನಿಲ್ಲ, ಆದರೆ ಅವೆನೆಲ್ಲೂ ಹೋಗಿಲ್ಲ, ಇಲ್ಲೇ ಇದ್ದಾನೆ. ಎಲ್ಲರ ಹೃದಯದಲ್ಲಿಯೂ ಅಪ್ಪು ಶಾಶ್ವತವಾಗಿದ್ದಾನೆ. ನಾನು ಅಪ್ಪುಗೆ ಅಣ್ಣ ಅಲ್ಲ, ನನಗೆ ಅವನು ಅಣ್ಣನಾಗಿ ಹೋಗಿದ್ದಾನೆ ಎಂದರು.

ಕಂಠೀರವ ಸ್ಟೇಡಿಯಂನಿಂದ ಹೊರಟ ಸೈಕಲ್ ಜಾಥಾ ಚಾಲುಕ್ಯ ಸರ್ಕಲ್, ಮೇಕ್ರಿ ಸರ್ಕಲ್, ಹೆಬ್ಬಾಳ, ಬಿಇಎಲ್ ಸರ್ಕಲ್, ಗೊರಗುಂಟೆಪಾಳ್ಯ, ರಾಜ್ ಕುಮಾರ್ ಸಮಾಧಿ ಬಳಿ ಸಾಗಿ ನಂತರ ಪುನೀತ್ ಸಮಾಧಿ ಬಳಿಗೆ ಹೋಗಿ ಪುಷ್ಪ ನಮನ ಸಲ್ಲಿಸಿ ನಂತರ ನಾಗರಭಾವಿ, ದೇವೇಗೌಡ ಪೆಟ್ರೋಲ್ ಬಂಕ್, ಸಾರಕ್ಕಿ ಸರ್ಕಲ್, ಬಿಟಿಎಂ ಜಂಕ್ಷನ್, ಸಿಲ್ಕ್ ಬೋರ್ಡ್, ಆಡುಗೋಡಿ, ರಿಚ್ಮಂಡ್ ಸರ್ಕಲ್, ಮೇಯೋ ಹಾಲ್ ಕಡೆಯಿಂದ ಪೊಲೀಸ್ ಹಾಕಿ ಗ್ರೌಂಡ್ ಗೆ ಆಗಮಿಸಿ ಅಂತ್ಯಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT