ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ 
ರಾಜ್ಯ

ರಾಜ್ಯದಲ್ಲಿ ಅಕಾಲಿಕ ಮಳೆಗೆ ಅಂದಾಜು 5 ಲಕ್ಷ ಎಕರೆ ಕೃಷಿ ಬೆಳೆ ನಷ್ಟ: ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಭೆ; ಪರಿಹಾರ, ದುರಸ್ತಿಗೆ ಸೂಚನೆ

ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ರಾಜ್ಯದಲ್ಲಿ 3.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ, ಒಂದೂವರೆ ಲಕ್ಷ ರೈತರು ಮಳೆಯ ಅವಾಂತರಗಳಿಗೆ ಒಳಗಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ರಾಜ್ಯದಲ್ಲಿ 3.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ, ಒಂದೂವರೆ ಲಕ್ಷ ರೈತರು ಮಳೆಯ ಅವಾಂತರಗಳಿಗೆ ಒಳಗಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರ ಅಧ್ಯಕ್ಷತೆಯಲ್ಲಿ ನಿನ್ನೆ ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಮತ್ತು ಈ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಹತ್ವದ ಸಭೆ ನಡೆಯಿತು. ಸರ್ಕಾರ ಈಗಾಗಲೇ ರೈತರಿಗೆ 130 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಿದೆ. ಇನ್ನಷ್ಟು 79 ಸಾವಿರ ಕೃಷಿಕರಿಗೆ 52 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸದ್ಯದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ನಿನ್ನೆ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಸರ್ಕಾರದ ಇತರ 8 ಹಿರಿಯ ಅಧಿಕಾರಿಗಳ ಜೊತೆ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ನಿನ್ನೆ ತಮ್ಮ ಕಾರ್ಯಾಲಯದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ಮೂರು ವಾರಗಳಲ್ಲಿ ಕೃಷಿ, ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆಪೀಡಿತ ಪ್ರದೇಶಗಳಲ್ಲಿ ಜಂಟಿ ಸಮೀಕ್ಷೆ ನಡೆಸಲಿದ್ದಾರೆ. ಬೆಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಕಂದಾಯ ಸಚಿವ ಆರ್ ಅಶೋಕ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮತ್ತು ಇತರರು ಹಾಜರಿದ್ದರು. 

ಒಟ್ಟಾರೆಯಾಗಿ, 24 ಜನರು ಇದುವರೆಗೆ ಮಳೆ ಅವಾಂತರಗಳಿಗೆ ಮೃತಪಟ್ಟಿದ್ದಾರೆ. 658 ಮನೆಗಳು ಹಾನಿಗೊಳಗಾಗಿವೆ, ಅವುಗಳಲ್ಲಿ 95 ಭಾಗಶಃ. 191 ದನಕರುಗಳು, ಕುರಿಗಳು ಮತ್ತು ಮೇಕೆಗಳು ಸತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಎಂಟು ವಲಯಗಳಲ್ಲಿ ಉಂಟಾದ ಹಾನಿಗೆ ತಕ್ಷಣ ಪರಿಹಾರ ನೀಡಲು ತಲಾ 25 ಲಕ್ಷ ರೂಪಾಯಿ ಹಾಗೂ ರಸ್ತೆಗಳ ದುರುಸ್ತಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ನಗರದ ಹಲವೆಡೆ ರಸ್ತೆಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರಿಗೆ ತೊಂದರೆಯಾಗದಂತೆ ತಡೆಯಲು ಬಿಬಿಎಂಪಿ ರಕ್ಷಣಾತ್ಮಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಬೀದಿದೀಪಗಳನ್ನು ಸರಿಯಾಗಿ ಅಳವಡಿಸಬೇಕು ಎಂದು ಹೇಳಲಾಗಿದೆ.

ಬೆಳೆ ನಷ್ಟಕ್ಕೆ ಬೆಳೆ ವಿಮೆಯನ್ನು ರೈತರಿಗೆ ತ್ವರಿತವಾಗಿ ನೀಡಲು ವಿಮಾ ಕಂಪನಿಗಳು ಅದರಲ್ಲೂ ಮನೆಗಳಿಗೆ ಆಗಿರುವ ಹಾನಿಯನ್ನು ಭಾವಚಿತ್ರ ಸಹಿತ ಒದಗಿಸಿ ಕೂಡಲೇ 1 ಲಕ್ಷ ರೂಪಾಯಿ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಸ್ತೆಗಳ ದುರಸ್ತಿಗೆ 500 ಕೋಟಿ ಬಿಡುಗಡೆ ಮಾಡಿದ್ದು, ರಸ್ತೆಗಳ ಪುನಶ್ಚೇತನಕ್ಕೆ ಪಿಡಬ್ಲ್ಯುಡಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT