ರಾಜ್ಯ

ರಾಜ್ಯದಲ್ಲಿಂದು ಕೊರೋನಾದಿಂದ ಐವರು ಸಾವು: 224 ಹೊಸ ಪ್ರಕರಣ ಪತ್ತೆ, 379 ಚೇತರಿಕೆ

Nagaraja AB

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ನಿನ್ನೆಗಿಂತ ಇಂದು ತುಸು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 224 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,94,001ಕ್ಕೆ ಏರಿಕೆಯಾಗಿದೆ. 

379 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 6,707 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಐವರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 38,182ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡವಾರು ಪ್ರಮಾಣ ಶೇ. 0.43 ರಷ್ಟಿದ್ದು, ಮರಣ ಪ್ರಮಾಣ ಶೇ. 2.23 ರಷ್ಟಿದೆ.

ಬೆಂಗಳೂರಿನಲ್ಲಿ 122 ಸೋಂಕಿತರು ಪತ್ತೆಯಾಗಿದ್ದು, 300 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

SCROLL FOR NEXT