ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸುತ್ತಿರುವ ಚಿತ್ರ 
ರಾಜ್ಯ

ಸಾರ್ವಜನಿಕ ಶೌಚಾಲಯ ದುರಸ್ಥಿಗೆ ಒತ್ತಾಯ: ಗದಗ್ ನಗರಸಭೆ ಕಚೇರಿಯಲ್ಲಿ ಮೂತ್ರ ವಿಸರ್ಜಿಸಿ ಪ್ರತಿಭಟನೆ!

ಸಾರ್ವಜನಿಕ ಶೌಚಾಲಯವನ್ನು ದುರಸ್ಥಿ ಮಾಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನೆಯ ಸುಮಾರು 15 ಸದಸ್ಯರು ಮಂಗಳವಾರ ಬೆಳಗ್ಗೆ ಗದಗ ಬೆಟಗೇರಿ ನಗರಸಭೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮೂಲಕ  ಪ್ರತಿಭಟನೆ ನಡೆಸಿದರು.

ಗದಗ್: ಸಾರ್ವಜನಿಕ ಶೌಚಾಲಯವನ್ನು ದುರಸ್ಥಿ ಮಾಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನೆಯ ಸುಮಾರು 15 ಸದಸ್ಯರು ಮಂಗಳವಾರ ಬೆಳಗ್ಗೆ ಗದಗ ಬೆಟಗೇರಿ ನಗರಸಭೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮೂಲಕ  ಪ್ರತಿಭಟನೆ ನಡೆಸಿದರು.

ಸಾರ್ವಜನಿಕ ಶೌಚಾಲಯ ದುರಸ್ತಿ ಮಾಡದಿದ್ದರೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮೂಲಕ ಪ್ರತಿಭಟನೆ ಮಾಡುವುದಾಗಿ ಒಂದು ವಾರದ ಹಿಂದೆಯೇ ಗದಗ ಬೆಟಗೇರಿ ನಗರಸಭೆಗೆ ಮನವಿ ಪತ್ರ ಸಲ್ಲಿಸಿದ್ದರು. ಆದರೆ, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಕಚೇರಿಯ ವಿವಿಧ ಕಡೆಗಳಲ್ಲಿ ಮೂತ್ರ ವಿಸರ್ಜಿಸಿದರು. 

ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು ಆದರೂ ಅವರನ್ನು ತಡೆಗಟ್ಟಲು ಸಾಧ್ಯವಾಗಲಿಲ್ಲಯ ಇನ್ನೂ 8-10 ದಿನಗಳಲ್ಲಿ ಶೌಚಾಲಯಗಳನ್ನು ದುರಸ್ಥಿ ಮಾಡದಿದ್ದಲ್ಲಿ ಜಿಲ್ಲಾಧಿಕಾರಿ ಮತ್ತು ನಗರಸಭೆ ಕಚೇರಿಯಲ್ಲಿ ಇದೇ ರೀತಿಯ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಗದಗ್ ನಲ್ಲಿ ಶೌಚಾಲಯಗಳ ಸ್ಥಿತಿ ಶೋಚನೀಯವಾಗಿದೆ. ನಮ್ಮ ಮನವಿಯನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆಯ ಬೇರೆ ದಾರಿಯಿಲ್ಲದೆ, ಈ ರೀತಿಯ ಪ್ರತಿಭಟನೆ ಮಾಡಿದ್ದಾಗಿ ಶ್ರೀರಾಮ ಸೇನೆ ಧಾರವಾಡ ಮತ್ತು ಗದಗ ಸಂಚಾಲಕ ರಾಜು ಖಾನಪ್ಪನವರ್ ಹೇಳಿದರು. 

ಪ್ರತಿಭಟನೆ ಗಮನಕ್ಕೆ ಬಂದಿದ್ದು, ಅವರ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಆಯುಕ್ತ ಗುರು ಪ್ರಸಾದ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT