ರಾಜ್ಯ

ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಡ: ಇದು ಸೂಕ್ತ ಸಂದರ್ಭವಲ್ಲ: ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಮನವಿ

Nagaraja AB

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ನಂತರ ಸರ್ಕಾರ ಪರಿಸ್ಥಿತಿಯನ್ನು ನಿರ್ವಹಿಸಿದ ರೀತಿ ಸಾರ್ವಜನಿಕರ ಪ್ರಶಂಸೆಗೆ ಒಳಗಾಗಿದೆ. ಅಲ್ಲದೇ, ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರುವ ಸರ್ಕಾರ, ಅವರ ಹೆಸರಿನಲ್ಲಿ ಸ್ನಾರಕ ನಿರ್ಮಾಣ ಮಾಡುವುದಾಗಿ ಹೇಳಿದೆ. 

ಇದೀಗ ಅಂಬರೀಶ್ ಅವರ ಸ್ಮಾರಕವನ್ನು ಕೂಡಾ ನಿರ್ಮಾಣ ಮಾಡಬೇಕೆಂದು ಅಭಿಮಾನಿಗಳು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳಿಗೆ ಭಾವಾತ್ಮಕ ಪತ್ರ ಬರೆದಿರುವ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ, ಇಂತಹ ಸಂದರ್ಭದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರದಂತ ಮನವಿ ಮಾಡಿಕೊಂಡಿದ್ದಾರೆ.

SCROLL FOR NEXT